ದಾರಿ ತಪ್ಪಿ ಬಂದ ಪಾಕ್ ಪ್ರಜೆಯನ್ನು ಪಾಕಿಸ್ತಾನ ರೇಂಜರ್‌ಗಳಿಗೆ ಹಸ್ತಾಂತರಿಸಿದ ಭಾರತ!

ಅಜಾಗರೂಕತೆಯಿಂದ ಭಾರತದ ಭೂಪ್ರದೇಶವನ್ನು ಪ್ರವೇಶಿಸಿದ ನಂತರ ಬಂಧಿಸಲ್ಪಟ್ಟ ಪಾಕಿಸ್ತಾನಿ ವ್ಯಕ್ತಿಯನ್ನು ಮಾನವೀಯ ಆಧಾರದ ಮೇಲೆ ಪಾಕಿಸ್ತಾನ ರೇಂಜರ್‌ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಬಿಎಸ್‌ಎಫ್ ವಕ್ತಾರರು ಭಾನುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಅಜಾಗರೂಕತೆಯಿಂದ ಭಾರತದ ಭೂಪ್ರದೇಶವನ್ನು ಪ್ರವೇಶಿಸಿದ ನಂತರ ಬಂಧಿಸಲ್ಪಟ್ಟ ಪಾಕಿಸ್ತಾನಿ ವ್ಯಕ್ತಿಯನ್ನು ಮಾನವೀಯ ಆಧಾರದ ಮೇಲೆ ಪಾಕಿಸ್ತಾನ ರೇಂಜರ್‌ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಬಿಎಸ್‌ಎಫ್ ವಕ್ತಾರರು ಭಾನುವಾರ ತಿಳಿಸಿದ್ದಾರೆ.

ಶನಿವಾರ ಪಂಜಾಬ್‌ನ ಫಾಜಿಲ್ಕಾ ಜಿಲ್ಲೆಯ ಗಡಿ ಬೇಲಿ ಬಳಿ ಪಾಕಿಸ್ತಾನಿ ಪ್ರಜೆಯನ್ನು ಗಡಿ ಭದ್ರತಾ ಪಡೆಗಳು ಬಂಧಿಸಿದ್ದವು. ವಿಚಾರಣೆ ವೇಳೆ ಆತನಿಗೆ ಅಂತರಾಷ್ಟ್ರೀಯ ಗಡಿ ಜೋಡಣೆಯ ಬಗ್ಗೆ ತಿಳಿದಿರಲಿಲ್ಲ ಮತ್ತು ಹೀಗಾಗಿ ಭಾರತದ ಭೂಪ್ರದೇಶವನ್ನು ದಾಟಿದ್ದಾನೆ ಎಂಬುದು ತಿಳಿಸಿದು ಬಂದಿತು ಎಂದು ಅವರು ಮಾಹಿತಿ ನೀಡಿದ್ದಾರೆ.

ಸಾಂದರ್ಭಿಕ ಚಿತ್ರ
ಪಾಕಿಸ್ತಾನ: ಪೊಲೀಸ್ ಠಾಣೆಗೆ ತೆರಳಿ ಆರಕ್ಷಕರನ್ನು ಥಳಿಸಿದ ಸೈನಿಕರು: ವೀಡಿಯೋ ವೈರಲ್

ಹುಡುಕಾಟದ ಸಮಯದಲ್ಲಿ ವ್ಯಕ್ತಿಯ ಮೇಲೆ ಆಕ್ಷೇಪಾರ್ಹವಾದ ಪ್ರಮಾದ ಏನೂ ಕಂಡುಬಂದಿಲ್ಲ. ಪಾಕಿಸ್ತಾನ ಪ್ರಜೆಯ ಅನಗತ್ಯ ಚಲನವಲನವನ್ನು ನಿರ್ಬಂಧಿಸುವಲ್ಲಿ ವಿಫಲವಾದ ಬಗ್ಗೆ ಕಳವಳ ವ್ಯಕ್ತಪಡಿಸಲು ಪಾಕಿಸ್ತಾನ ರೇಂಜರ್‌ಗಳೊಂದಿಗೆ ಧ್ವಜ ಸಭೆಯನ್ನು ನಡೆಸಲಾಯಿತು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com