ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ಬರ ಪರಿಹಾರ: ಅಂತರ ಸಚಿವಾಲಯ ಕೇಂದ್ರ ತಂಡದ ವರದಿ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕರ್ನಾಟಕ ಸರ್ಕಾರಕ್ಕೆ ಕೇಂದ್ರವು ಸುಮಾರು 3,400 ಕೋಟಿ ರೂಪಾಯಿಗಳನ್ನು ಪರಿಹಾರ ನಿಧಿಯಾಗಿ ಬಿಡುಗಡೆ ಮಾಡಿದೆ ಎಂದು ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ನ್ಯಾಯಾಲಯಕ್ಕೆ ತಿಳಿಸಿದರು.
Published on

ನವದೆಹಲಿ: ರಾಜ್ಯದಲ್ಲಿ ಬರ ಪರಿಹಾರವಾಗಿ ಕರ್ನಾಟಕಕ್ಕೆ ಸುಮಾರು 3,400 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ನಿನ್ನೆ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈ ಸಂದರ್ಭದಲ್ಲಿ ರಾಜ್ಯದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಲು ಅಂತರ ಸಚಿವಾಲಯದ ತಂಡವು ವರದಿ ನೀಡುವಂತೆ ಕೇಂದ್ರವನ್ನು ಸುಪ್ರೀಂ ಕೋರ್ಟ್ ಕೇಳಿದೆ.

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಕರ್ನಾಟಕ ಸರ್ಕಾರವು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದೆ. ತಕ್ಷಣವೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (NDRF) ರಾಜ್ಯಕ್ಕೆ ಹಣಕಾಸಿನ ನೆರವು ಬಿಡುಗಡೆ ಮಾಡಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಸರ್ಕಾರ ಮನವಿ ಸಲ್ಲಿಸಿತು.

ಕರ್ನಾಟಕ ಸರ್ಕಾರಕ್ಕೆ ಕೇಂದ್ರವು ಸುಮಾರು 3,400 ಕೋಟಿ ರೂಪಾಯಿಗಳನ್ನು ಪರಿಹಾರ ನಿಧಿಯಾಗಿ ಬಿಡುಗಡೆ ಮಾಡಿದೆ ಎಂದು ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಕರ್ನಾಟಕ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಕೂಡ ಇದೇ ವಿಷಯವನ್ನು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ರಾಜ್ಯ ಸರ್ಕಾರವು ಸುಮಾರು 18,000 ಕೋಟಿ ರೂಪಾಯಿ ಬರ ಪರಿಹಾರಕ್ಕಾಗಿ ಕೋರಿದ್ದು, ಕೇಂದ್ರದಿಂದ ಸುಮಾರು 3,400 ಕೋಟಿ ರೂಪಾಯಿಗಳನ್ನು ನೀಡಿದೆ ಎಂದು ವಕೀಲರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಅಂತರ್ ಸಚಿವಾಲಯದ ತಂಡವು ಬರ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿ ಉಪ ಸಮಿತಿಗೆ ವರದಿಯನ್ನು ಕಳುಹಿಸಿದೆ ಎಂದು ಹಿರಿಯ ವಕೀಲರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ನಂತರ ನ್ಯಾಯಾಲಯವು ವರದಿಯನ್ನು ತನ್ನ ಮುಂದೆ ಇಡುವಂತೆ ಅಟಾರ್ನಿ ಜನರಲ್‌ಗೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.

ಸುಪ್ರೀಂ ಕೋರ್ಟ್
ಬರ ಪರಿಹಾರ: ನ್ಯಾಯಕ್ಕಾಗಿ ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ- ಕಾಂಗ್ರೆಸ್

ಬರ ಪರಿಹಾರಕ್ಕೆ ಹಣಕಾಸು ನೆರವು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ವಿಚಾರಣೆ ನಡೆಸುತ್ತಿದೆ.

ಕರ್ನಾಟಕ ಸರ್ಕಾರವು ವಕೀಲ ಡಿಎಲ್ ಚಿದಾನಂದ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, ಅಂತಿಮ ನಿರ್ಧಾರವನ್ನು ತ್ವರಿತವಾಗಿ ತೆಗೆದುಕೊಳ್ಳುವಂತೆ ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ರಾಜ್ಯಕ್ಕೆ ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶಿಸುವಂತೆ ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದೆ.

ಸುಪ್ರೀಂ ಕೋರ್ಟ್
ಕೇಂದ್ರದ ಬರ ಪರಿಹಾರ ಮೊತ್ತ ಅತ್ಯಲ್ಪ,ಬಿಜೆಪಿಯಿಂದ ಕರ್ನಾಟಕಕ್ಕೆ ಅನ್ಯಾಯ': ಸಿಎಂ-ಡಿಸಿಎಂ ಸೇರಿ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ಡಿಆರ್‌ಎಫ್) ಪ್ರಕಾರ ಬರಗಾಲದ ವ್ಯವಸ್ಥೆಗೆ ಹಣಕಾಸಿನ ನೆರವು ಬಿಡುಗಡೆ ಮಾಡದ ಸರ್ಕಾರದ ಕ್ರಮವು ಕಲಂ 14 ರ ಅಡಿಯಲ್ಲಿ ಖಾತರಿಪಡಿಸಲಾದ ಕರ್ನಾಟಕ ರಾಜ್ಯದ ಜನರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಘೋಷಿಸಲು ಮನವಿಯಲ್ಲಿ ಕೋರಲಾಗಿದೆ.

ಕರ್ನಾಟಕ ಸರ್ಕಾರವು ಬರ ನಿರ್ವಹಣೆಯ ಕೈಪಿಡಿ ಅಡಿಯಲ್ಲಿ, ಅಂತರ್-ಸಚಿವಾಲಯದ ಕೇಂದ್ರ ತಂಡ (IMCT) ಒಂದು ತಿಂಗಳೊಳಗೆ NDRF ನಿಂದ ರಾಜ್ಯಕ್ಕೆ ಸಹಾಯದ ಕುರಿತು ಕೇಂದ್ರ ಸರ್ಕಾರವು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದೆ. ಕರ್ನಾಟಕವು ಭೀಕರ ಬರಗಾಲದಿಂದ ತತ್ತರಿಸುತ್ತಿದ್ದು, ಅದರ ನಾಗರಿಕರ ಜೀವನದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com