ಜಾರ್ಖಂಡ್‌: ಕನ್ವರ್ ಯಾತ್ರಾರ್ಥಿಗಳ ವಾಹನಕ್ಕೆ ವಿದ್ಯುತ್ ತಗುಲಿ ಐವರು ಸಾವು

ಕನ್ವರ್ ಯಾತ್ರೆ ವೇಳೆ ವಿದ್ಯುತ್ ತಗುಲಿ ಐವರು ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಲತೇಹಾರ್: ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಕನ್ವರ್ ಯಾತ್ರಾರ್ಥಿಗಳು ತೆರಳುತ್ತಿದ್ದ ವಾಹನಕ್ಕೆ ಹೈಟೆನ್ಷನ್ ಓವರ್‌ಹೆಡ್ ತಂತಿ ತಗುಲಿ ಐವರು ಯಾತ್ರಿಕರು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಡೆದಿದೆ.

ಕನ್ವರ್ ಯಾತ್ರೆ ವೇಳೆ ವಿದ್ಯುತ್ ತಗುಲಿ ಐವರು ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬಾಳುಮಠ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ ತಂ ತೋಲದಲ್ಲಿ ಈ ಘಟನೆ ನಡೆದಿದೆ. ಯಾತ್ರಿಕರು ದಿಯೋಘರ್‌ನ ಬಾಬಾ ಬೈದ್ಯನಾಥ ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ ಅವರ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ
ಕನ್ವರ್ ಮಾರ್ಗದಲ್ಲಿ ಮಸೀದಿ ಮತ್ತು ಮಝಾರ್ ಕಾಣದಂತೆ ಪರದೆ ಅವಳವಡಿಕೆ: ಭುಗಿಲೆದ್ದ ಆಕ್ರೋಶ!

"ಯಾತ್ರಿಕರ ವಾಹನದ ಮೇಲೆ ಹೈಟೆನ್ಷನ್ ಓವರ್ಹೆಡ್ ವೈರ್ ಬಿದ್ದಿದೆ. ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ" ಎಂದು ಬಾಲುಮಠ ಉಪವಿಭಾಗದ ಪೊಲೀಸ್ ಅಧಿಕಾರಿ ಅಶುತೋಷ್ ಕುಮಾರ್ ಸತ್ಯಂ ಅವರು ಪಿಟಿಐಗೆ ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com