ದೆಹಲಿ ಆಯ್ತು, ಈಗ ಜೈಪುರದಲ್ಲಿ ನೆಲಮಾಳಿಗೆಗೆ ನೀರು ನುಗ್ಗಿ ಮೂವರ ಸಾವು!

ಗುರುವಾರ ಮುಂಜಾನೆ ನಗರದ ವಿಶ್ವಕರ್ಮ ಪ್ರದೇಶದಲ್ಲಿ ಮಳೆ ನೀರು ಮನೆಯ ನೆಲಮಾಳಿಗೆಗೆ ನುಗ್ಗಿದ ಪರಿಣಾಮ ಅಪ್ರಾಪ್ತ ಬಾಲಕಿ ಸೇರಿದಂತೆ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಜೈಪುರ ಮಳೆ
ಜೈಪುರ ಮಳೆ
Updated on

ಜೈಪುರ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋಚಿಂಗ್ ಸೆಂಟರ್ ಒಂದರ ನೆಲ ಮಾಳಿಗೆಗೆ ನೀರು ನುಗ್ಗಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ್ದರು. ಇದೀಗ ಜೈಪುರದಲ್ಲಿ ಇಂತಹುದೇ ಘಟನೆ ನಡೆದಿದೆ.

ಗುರುವಾರ ಮುಂಜಾನೆ ನಗರದ ವಿಶ್ವಕರ್ಮ ಪ್ರದೇಶದಲ್ಲಿ ಮಳೆ ನೀರು ಮನೆಯ ನೆಲಮಾಳಿಗೆಗೆ ನುಗ್ಗಿದ ಪರಿಣಾಮ ಅಪ್ರಾಪ್ತ ಬಾಲಕಿ ಸೇರಿದಂತೆ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಲವು ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯ ನಂತರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮಳೆ ನೀರು ಮನೆಯ ನೆಲಮಾಳಿಗೆಗೆ ನುಗ್ಗಿದ ನಂತರ ಕುಟುಂಬ ಸದಸ್ಯರು ತಮ್ಮ ವಸ್ತುಗಳನ್ನು ತೆಗೆಯಲು ಪ್ರಾರಂಭಿಸಿದ್ದಾರೆ. ಆ ಸಂದರ್ಭದಲ್ಲಿ ನೆಲಮಾಳಿಗೆಯಲ್ಲಿ ನೀರು ತುಂಬಿದ್ದರಿಂದ ಎರಡು ಕುಟುಂಬಗಳ ಮೂವರು ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೂರ್ವ ವಲಯದ ಡಿಸಿಪಿ ಅಮಿತ್ ಕುಮಾರ್ ತಿಳಿಸಿದ್ದಾರೆ.

ಜೈಪುರ ಮಳೆ
ದೆಹಲಿ: ಕೋಚಿಂಗ್ ಸೆಂಟರ್ ಜಲಾವೃತ; ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು

ಎನ್ ಡಿಆರ್ ಎಫ್ ತಂಡ ಮೂವರ ಮೃತದೇಹಗಳನ್ನು ಹೊರಗೆ ತೆಗೆದ ನಂತರ ಕಾರ್ಯಾಚರಣೆಯನ್ನು ಅಂತ್ಯಗೊಳಿಸಲಾಗಿದೆ. ಮೂವರ ಪೈಕಿ ಒಬ್ಬರು ಬೇರೊಂದು ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮನೆಯ ನೆಲಮಾಳಿಗೆಯ ಮಾರ್ಗವು ಕಿರಿದಾದ ಮತ್ತು ಆಳವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಇದೇ ರೀತಿಯ ಮನೆಗಳ ನಿವಾಸಿಗಳು ಮಳೆಗಾಲದ ಸಮಯದಲ್ಲಿ ತಮ್ಮ ನೆಲಮಾಳಿಗೆಯಲ್ಲಿ ಇರದಂತೆ ಸೂಚಿಸಲಾಗಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕನ್ವಟಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com