SC, ST ಒಳ ಮೀಸಲಾತಿ: ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಚಿರಾಗ್ ಪಾಸ್ವಾನ್ ಮೇಲ್ಮನವಿ!

'ಶೇ.15 ರಷ್ಟು ಕೋಟಾದಲ್ಲಿ ಒಳ ಮೀಸಲಾತಿ ಕಲ್ಪಿಸುವ ಇತ್ತೀಚಿನ ತೀರ್ಪನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು'
ಚಿರಾಗ್ ಪಾಸ್ವಾನ್
ಚಿರಾಗ್ ಪಾಸ್ವಾನ್
Updated on

ಪಾಟ್ನಾ: ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯಗಳಿಗೆ ಅವಕಾಶ ನೀಡುವ ಸುಪ್ರೀಂ ಕೋರ್ಟ್ ತೀರ್ಪನ್ನು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶನಿವಾರ ವಿರೋಧಿಸಿದ್ದು, ಅದರ ವಿರುದ್ಧ ಲೋಕ ಜನಶಕ್ತಿ ಪಾರ್ಟಿ(ರಾಮ್ ವಿಲಾಸ್ ) ಮೇಲ್ಮನವಿ ಸಲ್ಲಿಸಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಾಸ್ವಾನ್, ಶೇ.15 ರಷ್ಟು ಕೋಟಾದಲ್ಲಿ ಒಳ ಮೀಸಲಾತಿ ಕಲ್ಪಿಸುವ ಇತ್ತೀಚಿನ ತೀರ್ಪನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದರು. ಪರಿಶಿಷ್ಟ ಜಾತಿ ಕೋಟಾದಲ್ಲಿ ಕೆನೆ ಪದರಕ್ಕೆ ಅವಕಾಶ ನೀಡಿಲ್ಲ. ಒಳ ಮೀಸಲಾತಿಗೆ ಅವಕಾಶ ನೀಡುವುದು ಅಸ್ಪೃಶ್ಯತೆಯಿಂದ ಸಾಮಾಜಿಕವಾಗಿ ಕೊನೆಯ ಅಂಚಿನಲ್ಲಿರುವ ವರ್ಗವನ್ನು ಮೇಲೆತ್ತುವ ಉದ್ದೇಶವನ್ನು ಪೂರೈಸುವುದಿಲ್ಲ ಎಂದು ಅವರು ಹೇಳಿದರು.

ಚಿರಾಗ್ ಪಾಸ್ವಾನ್
SC, ST ಒಳ ಮೀಸಲಾತಿ: ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ- ಸಿಎಂ ಸಿದ್ದರಾಮಯ್ಯ

ಬಹುಪಾಲು ಪರಿಶಿಷ್ಟ ಜಾತಿಯ ಜನರು, ಉತ್ತಮ ಕುಟುಂಬದ ಹಿನ್ನೆಲೆ ಹಾಗೂ ಶಿಕ್ಷಣ ಹೊಂದಿರುವವರು ಸಹ ಅಸ್ಪೃಶ್ಯತೆಯನ್ನು ಎದುರಿಸುತ್ತಾರೆ. ಆದ್ದರಿಂದ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಅವಕಾಶ ನೀಡುವುದು ಸಮರ್ಥನೀಯವಲ್ಲ ಎಂದರು.ಆದಾಗ್ಯೂ, ಈ ವಿಷಯದ ಬಗ್ಗೆ ಜೆಡಿಯು ನಿಲುವಿನ ಬಗ್ಗೆ ಪ್ರತಿಕ್ರಿಯಿಸಲು ಪಾಸ್ವಾನ್ ನಿರಾಕರಿಸಿದರು. ನಿತೀಶ್ ಕುಮಾರ್ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com