ಶಿರೂರು ಭೂಕುಸಿತ: ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ನಿವಾಸಕ್ಕೆ ಸಿಎಂ ಪಿಣರಾಯಿ ವಿಜಯನ್ ಭೇಟಿ

ಗಂಗಾವಳಿ ನದಿಯಲ್ಲಿ ಅರ್ಜುನ್‌ಗಾಗಿ ಹುಡುಕಾಟ ಪುನರಾರಂಭಿಸದ ಬಗ್ಗೆ ಅರ್ಜನ್ ಅವರ ಕುಟುಂಬ ದೂರು ನೀಡಿದೆ. ಇಂದು ಬೆಳಗ್ಗೆ ಜಿಲ್ಲೆಯ ಕನ್ನಡಿಕಲ್‌ನಲ್ಲಿರುವ ಅರ್ಜುನ್ ಮನೆಗೆ ಭೇಟಿ ನೀಡಿದ ಪಿಣರಾಯಿ, ಕುಟುಂಬ ಸದಸ್ಯರೊಂದಿಗೆ ಸಂವಾದ ನಡೆಸಿದರು.
ಅರ್ಜುನ್ ನಿವಾಸದಲ್ಲಿ ಸಿಎಂ ಪಿಣರಾಯಿ ವಿಜಯನ್
ಅರ್ಜುನ್ ನಿವಾಸದಲ್ಲಿ ಸಿಎಂ ಪಿಣರಾಯಿ ವಿಜಯನ್
Updated on

ಕೋಝಿಕ್ಕೋಡ್: ಶಿರೂರು ಭೂಕುಸಿತ ದುರಂತದಲ್ಲಿ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ನಿವಾಸಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾನುವಾರ ಭೇಟಿ ನೀಡಿದರು.

ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಅರ್ಜುನ್ ಮರ ತುಂಬಿದ ಲಾರಿಯಲ್ಲಿ ಕೋಝಿಕ್ಕೋಡ್‌ ಕಡೆಗೆ ಹೋಗುತ್ತಿದ್ದರು. ಅಂದಿನಿಂದ ಅವರು ಕಣ್ಮರೆಯಾಗಿದ್ದಾರೆ. ಅವರಿಗಾಗಿ ನಡೆಸಿದ ಕಾರ್ಯಾಚರಣೆ ಸಫಲವಾಗಿಲ್ಲ.

ಗಂಗಾವಳಿ ನದಿಯಲ್ಲಿ ಅರ್ಜುನ್‌ಗಾಗಿ ಹುಡುಕಾಟ ಪುನರಾರಂಭಿಸದ ಬಗ್ಗೆ ಅರ್ಜನ್ ಅವರ ಕುಟುಂಬ ದೂರು ನೀಡಿದೆ. ಇಂದು ಬೆಳಗ್ಗೆ ಜಿಲ್ಲೆಯ ಕನ್ನಡಿಕಲ್‌ನಲ್ಲಿರುವ ಅರ್ಜುನ್ ಮನೆಗೆ ಭೇಟಿ ನೀಡಿದ ಪಿಣರಾಯಿ, ಕುಟುಂಬ ಸದಸ್ಯರೊಂದಿಗೆ ಸಂವಾದ ನಡೆಸಿದರು.

ಅರ್ಜುನ್‌ನ ಪತ್ತೆಗೆ ಸಾಧ್ಯವಿರುವ ಎಲ್ಲಾ ಕ್ರಮ ಕೈಗೊಳ್ಳುವ ಕುರಿತು ಭರವಸೆ ನೀಡಿದರು. ಕರ್ನಾಟಕ ಸರ್ಕಾರ ಕಾರ್ಯಾಚರಣೆಯನ್ನು ಪುನರಾರಂಭಿಸುವುದಾಗಿ ಭರವಸೆ ನೀಡಿದೆ. ರಾಜ್ಯ ಸರ್ಕಾರವು ಈ ಪ್ರಕರಣವನ್ನು ನಿರಂತರವಾಗಿ ಗಮನ ಹರಿಸುತ್ತಿದೆ ಎಂದರು.

ಅರ್ಜುನ್ ನಿವಾಸದಲ್ಲಿ ಸಿಎಂ ಪಿಣರಾಯಿ ವಿಜಯನ್
ಶಿರೂರು ಭೂ ಕುಸಿತ: ಕಾಣೆಯಾದವರ ಪತ್ತೆಗೆ ಸಾಧ್ಯವಿರುವ ಎಲ್ಲ ಮಾರ್ಗಗಳನ್ನು ಹುಡುಕಿ- ಕೇರಳ ಸಚಿವ ಒತ್ತಾಯ

ಪಿಣರಾಯಿ ಅವರು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸುವಂತೆ ಒತ್ತಾಯಿಸಿದ್ದಾರೆ. ಅರ್ಜುನ್‌ನ ಪತ್ತೆಗಾಗಿ ಕುಟುಂಬದವರ ಕಳವಳವನ್ನು ಕರ್ನಾಟಕ ಸರ್ಕಾರಕ್ಕೆ ತಿಳಿಸಲಾಗುವುದು ಎಂದು ಪಿಣರಾಯಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಭೂಕುಸಿತ ಸಂಭವಿಸಿದ ಶಿರೂರುನಲ್ಲಿ ಆತನ ಪತ್ತೆಗೆ ಹಲವು ಸಂಸ್ಥೆಗಳು ಶೋಧ ಕಾರ್ಯಾಚರಣೆ ನಡೆಸಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com