ರಾಜ್ಯಸಭೆಯ 12 ಸ್ಥಾನಗಳಿಗೆ ಚುನಾವಣೆ ಘೋಷಣೆ; ಸೆಪ್ಟೆಂಬರ್ 3 ರಂದು ಮತದಾನ

ಆಗಸ್ಟ್ 14 ರಂದು ರಾಜ್ಯಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನಾಂಕವಾಗಿದೆ.
ಸಂಸತ್ ಭವನ
ಸಂಸತ್ ಭವನ
Updated on

ನವದೆಹಲಿ: ಒಂಬತ್ತು ರಾಜ್ಯಗಳಲ್ಲಿ ಖಾಲಿ ಇರುವ 12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಬುಧವಾರ ಘೋಷಿಸಿದೆ.

ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಸರ್ಬಾನಂದ ಸೋನೋವಾಲ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಾಲಿ ಸದಸ್ಯರು ಲೋಕಸಭೆಗೆ ಆಯ್ಕೆಯಾದ ನಂತರ ತೆರವಾದ ಸ್ಥಾನಗಳಿಗೆ ಈಗ ಚುನಾವಣೆ ಘೋಷಿಸಲಾಗಿದೆ.

ಆಗಸ್ಟ್ 14 ರಂದು ರಾಜ್ಯಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನಾಂಕವಾಗಿದೆ.

ಸಂಸತ್ ಭವನ
ರಾಜ್ಯಸಭೆ ಚುನಾವಣೆಗೂ ಮುನ್ನ ಸೋಲೊಪ್ಪಿಕೊಂಡ ಕುಮಾರಸ್ವಾಮಿ

ಪ್ರತಿ ರಾಜ್ಯಸಭಾ ಸ್ಥಾನಕ್ಕೆ ಸೆಪ್ಟೆಂಬರ್ 3 ರಂದು ಪ್ರತ್ಯೇಕವಾಗಿ ಮತದಾನ ನಡೆಸಲಾಗುವುದು ಮತ್ತು ಅಂದೇ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com