20 ಲಕ್ಷ ರೂ. ಲಂಚ ಪಡೆದ ಇಡಿ ಸಹಾಯಕ ನಿರ್ದೇಶಕರನ್ನು ಬಂಧಿಸಿದ ಸಿಬಿಐ

ಸಹಾಯಕ ನಿರ್ದೇಶಕ ಸಂದೀಪ್ ಸಿಂಗ್ ಯಾದವ್ ಅವರು ಆಭರಣ ವ್ಯಾಪಾರಿಯ ಪುತ್ರನಿಗೆ 25 ಲಕ್ಷ ರೂಪಾಯಿ ನೀಡದಿದ್ದರೆ ಬಂಧಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಮುಂಬೈ ಮೂಲದ ಆಭರಣ ವ್ಯಾಪಾರಿಯಿಂದ 20 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಸಹಾಯಕ ನಿರ್ದೇಶಕರನ್ನು ಸಿಬಿಐ ಬಂಧಿಸಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.

ಜಾರಿ ನಿರ್ದೇಶನಾಲಯ(ಇಡಿ) ಆಗಸ್ಟ್ 3 ಮತ್ತು 4 ರಂದು ಆಭರಣ ವ್ಯಾಪಾರಿ ಮನೆ ಮತ್ತು ಅಂಗಡಿಯಲ್ಲಿ ಶೋಧ ನಡೆಸಿತ್ತು. ಇದರ ನಂತರ ಸಹಾಯಕ ನಿರ್ದೇಶಕ ಸಂದೀಪ್ ಸಿಂಗ್ ಯಾದವ್ ಅವರು ಆಭರಣ ವ್ಯಾಪಾರಿಯ ಪುತ್ರನಿಗೆ 25 ಲಕ್ಷ ರೂಪಾಯಿ ನೀಡದಿದ್ದರೆ ಬಂಧಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ.

ಮಾತುಕತೆ ವೇಳೆ ಲಂಚದ ಬೇಡಿಕೆಯನ್ನು 20 ಲಕ್ಷ ರೂ.ಗೆ ಇಳಿಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ವಾಲ್ಮೀಕಿ ಹಗರಣ: ಸಿಬಿಐ ತನಿಖೆಗೆ ಆಕ್ಷೇಪಣೆ ಸಲ್ಲಿಸಲಿದೆ ರಾಜ್ಯ ಸರ್ಕಾರ

ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯ(ಸಿಬಿಡಿಟಿ) ಅಧಿಕಾರಿಯಾಗಿರುವ ಯಾದವ್ ಅವರು ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com