Kiran rijiju
ಕಿರಣ್ ರಿಜಿಜುonline desk

ವಕ್ಫ್ ಆಸ್ತಿ (ಅನಧಿಕೃತ ನಿವಾಸಿಗಳ ತೆರವು) ಮಸೂದೆ, 2014 ನ್ನು ಹಿಂಪಡೆದ ಸರ್ಕಾರ

ವಕ್ಫ್ ಆಸ್ತಿ (ಅನಧಿಕೃತ ನಿವಾಸಿಗಳ ತೆರವು), ಮಸೂದೆ, 2014 ನ್ನು ಹಿಂದಿನ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕೆ ರೆಹಮಾನ್ ಖಾನ್ ಅವರು ಫೆಬ್ರವರಿ 18, 2014 ರಂದು ರಾಜ್ಯಸಭೆಯಲ್ಲಿ ಮಂಡಿಸಿದ್ದರು.
Published on

ನವದೆಹಲಿ: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಆ.08 ರಂದು ವಕ್ಫ್ ಆಸ್ತಿ (ಅನಧಿಕೃತ ನಿವಾಸಿಗಳ ತೆರವು) ಮಸೂದೆ, 2014 ನ್ನು ಹಿಂಪಡೆದಿದೆ.

ವಕ್ಫ್ ಆಸ್ತಿಗಳಿಂದ ಅನಧಿಕೃತ ನಿವಾಸಿಗಳನ್ನು ಹೊರಹಾಕುವ ಕಾರ್ಯವಿಧಾನಕ್ಕೆ ಈ ಮಸೂದೆ ನೆರವಾಗಿತ್ತು. ಇದನ್ನು ಈಗ ಹಿಂಪಡೆಯುವುದಾಗಿ ರಾಜ್ಯಸಭೆಯಲ್ಲಿ ಸರ್ಕಾರ ಘೋಷಿಸಿದೆ.

ವಕ್ಫ್ ಆಸ್ತಿ (ಅನಧಿಕೃತ ನಿವಾಸಿಗಳ ತೆರವು), ಮಸೂದೆ, 2014 ನ್ನು ಹಿಂದಿನ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕೆ ರೆಹಮಾನ್ ಖಾನ್ ಅವರು ಫೆಬ್ರವರಿ 18, 2014 ರಂದು ರಾಜ್ಯಸಭೆಯಲ್ಲಿ ಮಂಡಿಸಿದ್ದರು. ಇದನ್ನು ಮಾರ್ಚ್ 5, 2014 ರಂದು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯದ ಸ್ಥಾಯಿ ಸಮಿತಿಗೆ ಕಳುಹಿಸಲಾಗಿತ್ತು.

ಧಾರ್ಮಿಕ ಅಥವಾ ದತ್ತಿ ಉದ್ದೇಶಗಳಿಗಾಗಿ ಮೀಸಲಾದ ಸ್ವತ್ತುಗಳನ್ನು ವಕ್ಫ್ ಆಸ್ತಿಗಳು ಎಂದು ಉಲ್ಲೇಖಿಸಲಾಗುತ್ತದೆ.

Kiran rijiju
ವಕ್ಫ್ (ತಿದ್ದುಪಡಿ) ಮಸೂದೆ, 2024 ಮಂಡನೆ; ವಿರೋಧ ಪಕ್ಷಗಳಿಗೆ ಕಿರಣ್ ರಿಜಿಜು ಹೇಳಿದ್ದಿಷ್ಟು...

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಸೂದೆಯನ್ನು ಹಿಂಪಡೆಯಲು ಸದನದ ಅನುಮತಿ ಕೋರಿದರು ಮತ್ತು ಸದಸ್ಯರು ರಾಜ್ಯಸಭೆಯಲ್ಲಿ ಧ್ವನಿ ಮತದ ಮೂಲಕ ಹಿಂತೆಗೆದುಕೊಳ್ಳುವಿಕೆಯನ್ನು ಅಂಗೀಕರಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com