ಉತ್ತರ ಪ್ರದೇಶ: ಗಂಗಾ ನದಿಯಲ್ಲಿ ತಂದೆಯ ಚಿತಾಭಸ್ಮ ವಿಸರ್ಜಿಸುವಾಗ ಮುಳುಗಿದ ಯುವಕನ ಸಾವು!

ಹೃದಯಾಘಾತದಿಂದ ಮೃತಪಟ್ಟಿದ್ದ ತನ್ನ ತಂದೆಯ ಅಂತ್ಯಕ್ರಿಯೆಯನ್ನು ನೆರವೇರಿಸಿದ ನಂತರ, ಚಿತಾಭಸ್ಮವನ್ನು ಗಂಗಾ ನದಿಯಲ್ಲಿ ವಿಸರ್ಜಿಸುವಾಗ ನೀರಿನ ಹರಿವು ಹೆಚ್ಚಾಗಿದ್ದು, ಯುವಕ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಉತ್ತರ ಪ್ರದೇಶ: ಮೃತ ತಂದೆಯ ಅಂತ್ಯಕ್ರಿಯೆ ಅಂಗವಾಗಿ ಚಿತಾಭಸ್ಮವನ್ನು ಪವಿತ್ರ ಗಂಗಾನದಿಯಲ್ಲಿ ವಿಸರ್ಜಿಸುವಾಗ ಯುವಕನೊಬ್ಬ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ

ಬ್ರಜ್‌ಘಾಟ್‌ನಲ್ಲಿ ಈ ಘಟನೆ ನಡೆದಿದ್ದು, 22 ವರ್ಷದ ಯುವಕ ಅರ್ಜುನ್ ವೈದ್ ನದಿಯಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ.

ಹೃದಯಾಘಾತದಿಂದ ಮೃತಪಟ್ಟಿದ್ದ ತನ್ನ ತಂದೆಯ ಅಂತ್ಯಕ್ರಿಯೆಯನ್ನು ನೆರವೇರಿಸಿದ ಅರ್ಜುನ್, ಚಿತಾಭಸ್ಮವನ್ನು ಗಂಗಾ ನದಿಯಲ್ಲಿ ವಿಸರ್ಜಿಸುವಾಗ ನೀರಿನ ಹರಿವು ಹೆಚ್ಚಾಗಿದ್ದು, ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

ಸಾಂದರ್ಭಿಕ ಚಿತ್ರ
ಒಡಿಶಾ: ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು, 7 ಮಂದಿ ನಾಪತ್ತೆ

ಸ್ಥಳದಲ್ಲಿದ್ದ ಮುಳುಗುತಜ್ಞರು ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅವರ ಪ್ರಯತ್ನ ಸಫಲವಾಗದೆ ಅರ್ಜುನ್ ಸಾವನ್ನಪ್ಪಿರುವುದಾಗಿ ಸರ್ಕಲ್ ಆಫೀಸರ್ (ಗಢ ಮುಕ್ತೇಶ್ವರ) ಅಶುತೋಷ್ ಶಿವಂ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com