'ಸಂವಿಧಾನಕ್ಕೆ ಬದ್ಧ; SC/ST ಕೆನೆಪದರಕ್ಕೆ ಅವಕಾಶವಿಲ್ಲ': ಕೇಂದ್ರ ಸರ್ಕಾರ

ಬಿ ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಪ್ರಕಾರ ಎಸ್‌ಸಿ-ಎಸ್‌ಟಿ ಮೀಸಲಾತಿಯಲ್ಲಿ ಕೆನೆಪದರಕ್ಕೆ ಅವಕಾಶವಿಲ್ಲ ಎಂದು ವೈಷ್ಣವ್ ಹೇಳಿದರು.
ಕೇಂದ್ರ ಸಚಿವ ಅಶ್ವಿನ್ ವೈಷ್ಣವ್
ಕೇಂದ್ರ ಸಚಿವ ಅಶ್ವಿನ್ ವೈಷ್ಣವ್
Updated on

ನವದೆಹಲಿ: ಬಿಆರ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಲ್ಲಿ ಎಸ್‌ಸಿ ಮತ್ತು ಎಸ್‌ಟಿಗಳಿಗೆ ಮೀಸಲಾತಿಯಲ್ಲಿ ಕೆನೆ ಪದರಕ್ಕೆ ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಸಚಿವ ಸಂಪುಟ ಶುಕ್ರವಾರ ಪ್ರತಿಪಾದಿಸಿದೆ. ಉಪ ಕೋಟಾಗಳ ಕುರಿತು ಕಳೆದ ವಾರ ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು.

ಅತಿ ಹಿಂದುಳಿದ ಗುಂಪುಗಳನ್ನು ಉನ್ನತೀಕರಿಸುವ ಉದ್ದೇಶದಿಂದ ಮೀಸಲಾತಿ ವರ್ಗದೊಳಗೆ ಕೋಟಾಗಳನ್ನು ನಿಯೋಜಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪ-ವರ್ಗೀಕರಿಸಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಕೇಂದ್ರ ಸಚಿವ ಸಂಪುಟದ ನಿರ್ಧಾರಗಳ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಸಂವಿಧಾನದಲ್ಲಿ ನೀಡಲಾಗಿರುವ ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿಯ ಉಪವರ್ಗೀಕರಣದ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಕೇಂದ್ರ ಸಚಿವ ಸಂಪುಟವು ವಿಸ್ತೃತ ಚರ್ಚೆಯನ್ನು ಕಾರ್ಯಗತಗೊಳಿಸಲು ನಿರ್ಧರಿಸಿತು ಎಂದು ಹೇಳಿದೆ.

ಬಿ ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಪ್ರಕಾರ ಎಸ್‌ಸಿ-ಎಸ್‌ಟಿ ಮೀಸಲಾತಿಯಲ್ಲಿ ಕೆನೆಪದರಕ್ಕೆ ಅವಕಾಶವಿಲ್ಲ ಎಂದು ವೈಷ್ಣವ್ ಹೇಳಿದರು.

ರಾಜ್ಯಗಳು ಎಸ್‌ಸಿ ಮತ್ತು ಎಸ್‌ಟಿಗಳಲ್ಲಿ ಕೆನೆಪದರವನ್ನು ಗುರುತಿಸಿ ಮೀಸಲಾತಿ ಪ್ರಯೋಜನಗಳಿಂದ ಹೊರಗಿಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಆದರೆ ಎನ್‌ಡಿಎ ಸರ್ಕಾರವು ನಿಬಂಧನೆಗಳಿಗೆ ದೃಢವಾಗಿ ಬದ್ಧವಾಗಿದೆ, ಎಸ್‌ಸಿ-ಎಸ್‌ಟಿ ಮೀಸಲಾತಿಗೆ ಸಂವಿಧಾನದ ಅನುಸಾರವಾಗಿರಬೇಕು ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com