ಪ್ರವಾದಿ ವಿರುದ್ಧ ಹೇಳಿಕೆ: ಹಿಂದೂ ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜರ ವಿರುದ್ಧ ಎಫ್‌ಐಆರ್!

ಪ್ರವಾದಿ ಮೊಹಮ್ಮದ್ ಮತ್ತು ಇಸ್ಲಾಂ ಧರ್ಮದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಹಿಂದೂ ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ವಿರುದ್ಧ ಮಹಾರಾಷ್ಟ್ರದ ಥಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ರಾಮಗಿರಿ ಮಹಾರಾಜ್
ರಾಮಗಿರಿ ಮಹಾರಾಜ್PTI
Updated on

ಮುಂಬೈ: ಪ್ರವಾದಿ ಮೊಹಮ್ಮದ್ ಮತ್ತು ಇಸ್ಲಾಂ ಧರ್ಮದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಹಿಂದೂ ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ವಿರುದ್ಧ ಮಹಾರಾಷ್ಟ್ರದ ಥಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಾಸಿಕ್ ಜಿಲ್ಲೆಯ ಸಿನ್ನಾರ್ ತಾಲೂಕಿನ ಶಾ ಪಾಂಚಲೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಮಗಿರಿ ಮಹಾರಾಜರು ಈ ಹೇಳಿಕೆ ನೀಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮುಂಬ್ರಾ ಪೊಲೀಸರು ಧಾರ್ಮಿಕ ಮುಖಂಡನ ವಿರುದ್ಧ ಬಿಎನ್‌ಎಸ್ ಸೆಕ್ಷನ್ 302 ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರಾಮಗಿರಿ ಮಹಾರಾಜರ ವಿರುದ್ಧ ನಾಸಿಕ್ ಮತ್ತು ಛತ್ರಪತಿ ಸಂಭಾಜಿನಗರದಲ್ಲೂ ಎಫ್‌ಐಆರ್ ದಾಖಲಾಗಿದೆ.

ರಾಮಗಿರಿ ಮಹಾರಾಜ್
ಪ್ರವಾದಿ ಬಗ್ಗೆ ಹೇಳಿಕೆ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರ ಉದ್ವಿಗ್ನ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಈ ಹೇಳಿಕೆ ನೀಡಿರುವುದಾಗಿ ರಾಮಗಿರಿ ಹೇಳಿದ್ದಾರೆ. ಹಿಂದೂಗಳನ್ನು ಒಗ್ಗೂಡಿಸುವುದು ಅವರ ಉದ್ದೇಶವಾಗಿತ್ತು. ನಾನು ಬಯಸಿದ್ದನ್ನು ನಾನು ಮಾತನಾಡಿದ್ದೇನೆ, ನಾನು ಅದರಲ್ಲಿ ದೃಢವಾಗಿದ್ದೇನೆ ಮತ್ತು ಅದರ ಪರಿಣಾಮಗಳನ್ನು ಎದುರಿಸಲು ನಾನು ಸಿದ್ಧ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com