ಬಿಜೆಪಿಯಿಂದ ನಮ್ಮ ಶಾಸಕರ ಖರೀದಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಜೆಎಂಎಂ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ದೆಹಲಿ ತಲುಪಿದ ಕೆಲವೇ ಗಂಟೆಗಳ ನಂತರ ಹೇಮಂತ್ ಸೊರೆನ್ ಅವರ ಹೇಳಿಕೆ ಹೊರಬಿದ್ದಿದೆ.
Hemant Soren
ಹೇಮಂತ್ ಸೊರೆನ್
Updated on

ಗೊಡ್ಡಾ: ಜೆಎಂಎಂ ನಾಯಕ ಚಂಪೈ ಸೊರೆನ್ ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳ ಮಧ್ಯೆ, ಕೇಸರಿ ಪಕ್ಷವು ನಮ್ಮ ಶಾಸಕರನ್ನು ಖರೀದಿಸುತ್ತಿದೆ ಮತ್ತು ಸಮಾಜವನ್ನು ವಿಭಜಿಸುತ್ತದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಭಾನುವಾರ ಆರೋಪಿಸಿದ್ದಾರೆ.

ಜೆಎಂಎಂ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ದೆಹಲಿ ತಲುಪಿದ ಕೆಲವೇ ಗಂಟೆಗಳ ನಂತರ ಹೇಮಂತ್ ಸೊರೆನ್ ಹೇಳಿಕೆ ಹೊರಬಿದ್ದಿದೆ.

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಸರ್ಕಾರಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಹೇಮಂತ್ ಸೊರೆನ್, ಬಿಜೆಪಿಯು ಗುಜರಾತ್, ಅಸ್ಸಾಂ ಮತ್ತು ಮಹಾರಾಷ್ಟ್ರದಿಂದ ಜನರನ್ನು ಕರೆತಂದಿದ್ದು, "ಆದಿವಾಸಿಗಳು, ದಲಿತರು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರನ್ನು ವಿಭಜಿಸಿ, ಪರಸ್ಪರ ಹೊಡೆದಾಡುವಂತೆ" ಮಾಡುತ್ತಿದೆ ಎಂದು ಆರೋಪಿಸಿದರು.

Hemant Soren
'ಅವಮಾನಕ್ಕೊಳಗಾದೆ, ಪಕ್ಷದಲ್ಲಿ ಅಸ್ತಿತ್ವ ಇಲ್ಲ': ಜೆಎಂಎಂ ತೊರೆಯುವ ಸುಳಿವು ನೀಡಿದ ಚಂಪೈ ಸೊರೆನ್

ಈ ಜನ, ಸಮಾಜ, ಕುಟುಂಬ ಮತ್ತು ಪಕ್ಷಗಳನ್ನು ಒಡೆಯುವ ಕೆಲಸ ಮಾಡುತ್ತಾರೆ. ಅವರು ಶಾಸಕರನ್ನು ಖರೀದಿಸುತ್ತಾರೆ. ಹಣವು ರಾಜಕಾರಣಿಗಳು ಇಲ್ಲಿಂದ ಅಲ್ಲಿಗೆ ಹೋಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದರು.

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಜೆಎಂಎಂ ತೊರೆದು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂಬ ಊಹಾಪೋಹಗಳ ನಡುವೆ ಅವರು ಇಂದು ದೆಹಲಿಗೆ ತೆರಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com