ರಾಹುಲ್ ಗಾಂಧಿ ಪೌರತ್ವ ವಿವಾದ: ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು PIL ಪೀಠಕ್ಕೆ ವರ್ಗಾಯಿಸಿದ ದೆಹಲಿ ಹೈಕೋರ್ಟ್!

ವಿವಾದವು ಆಗಸ್ಟ್ 2019ರ ಹಿಂದಿನದು, ಸ್ವಾಮಿ ಅವರು ಕೇಂದ್ರಕ್ಕೆ ಪತ್ರ ಬರೆದು ರಾಹುಲ್ ಗಾಂಧಿ ಬ್ರಿಟಿಷ್ ಸರ್ಕಾರಕ್ಕೆ ಸಲ್ಲಿಸಿದ ದಾಖಲೆಗಳಲ್ಲಿ ತಮ್ಮನ್ನು ಬ್ರಿಟಿಷ್ ಪ್ರಜೆ ಎಂದು ಘೋಷಿಸುವ ಮೂಲಕ ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.
ಸುಬ್ರಮಣಿಯನ್ ಸ್ವಾಮಿ-ರಾಹುಲ್ ಗಾಂಧಿ
ಸುಬ್ರಮಣಿಯನ್ ಸ್ವಾಮಿ-ರಾಹುಲ್ ಗಾಂಧಿTNIE
Updated on

ನವದೆಹಲಿ: ಸಂಸದ ರಾಹುಲ್ ಗಾಂಧಿ ಭಾರತೀಯ ಪೌರತ್ವವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ವಿಚಾರಣೆ ನಡೆಸಲಿದೆ.

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಬೇಕೆಂಬ ಬೇಡಿಕೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ಸ್ವಾಮಿ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.

ನ್ಯಾಯಮೂರ್ತಿ ಸಂಜೀವ್ ನರುಲಾ ಅವರು ಸಂವಿಧಾನದ 226ನೇ ವಿಧಿಯ ಅಡಿಯಲ್ಲಿ ರಿಟ್ ಅರ್ಜಿ ನ್ಯಾಯವ್ಯಾಪ್ತಿಯನ್ನು ಅನ್ವಯಿಸಲು ಯಾವುದೇ ಜಾರಿಗೊಳಿಸಬಹುದಾದ ಕಾನೂನು ಹಕ್ಕನ್ನು ಸ್ವಾಮಿ ಪ್ರದರ್ಶಿಸಿಲ್ಲ ಎಂದು ಗಮನಿಸಿದರು. ಹೀಗಾಗಿ ಪಿಐಎಲ್ ನ್ಯಾಯವ್ಯಾಪ್ತಿಯಡಿ ಪ್ರಕರಣವನ್ನು ಪರಿಗಣಿಸಬಹುದು ಎಂದು ಸಲಹೆ ನೀಡಿದರು.

ಸುಬ್ರಮಣಿಯನ್ ಸ್ವಾಮಿ-ರಾಹುಲ್ ಗಾಂಧಿ
ಯಾವುದೇ ಬೆಲೆ ತೆತ್ತಾದರೂ ಬಿಜೆಪಿಯ ಪಿತೂರಿ ವಿಫಲಗೊಳಿಸುತ್ತೇವೆ: ರಾಹುಲ್ ಗಾಂಧಿ

ವಿವಾದವು ಆಗಸ್ಟ್ 2019ರ ಹಿಂದಿನದು, ಸ್ವಾಮಿ ಅವರು ಕೇಂದ್ರಕ್ಕೆ ಪತ್ರ ಬರೆದು ರಾಹುಲ್ ಗಾಂಧಿ ಬ್ರಿಟಿಷ್ ಸರ್ಕಾರಕ್ಕೆ ಸಲ್ಲಿಸಿದ ದಾಖಲೆಗಳಲ್ಲಿ ತಮ್ಮನ್ನು ಬ್ರಿಟಿಷ್ ಪ್ರಜೆ ಎಂದು ಘೋಷಿಸುವ ಮೂಲಕ ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು. ಭಾರತೀಯ ಪ್ರಜೆಯಾದ ಗಾಂಧಿ ಭಾರತೀಯ ಸಂವಿಧಾನದ 9ನೇ ವಿಧಿ ಮತ್ತು 1955ರ ಭಾರತೀಯ ಪೌರತ್ವ ಕಾಯ್ದೆಯನ್ನು ಉಲ್ಲಂಘಿಸಿರಬಹುದು ಎಂದು ಅವರು ಪ್ರತಿಪಾದಿಸಿದರು. ಇದು ಭಾರತೀಯ ನಾಗರಿಕರು ದ್ವಿ ಪೌರತ್ವವನ್ನು ಹೊಂದುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com