ಕೋಲ್ಕತ್ತಾ ಹತ್ಯೆ ಪ್ರಕರಣ ದೇಶಾದ್ಯಂತ ವೈದ್ಯರ ಸುರಕ್ಷತೆ ಸಮಸ್ಯೆ ತೋರಿಸುತ್ತಿದೆ; ಸ್ವಯಂಪ್ರೇರಿತ ಕೇಸು ದಾಖಲು: ಸುಪ್ರೀಂ ಕೋರ್ಟ್

ಘಟನೆಯನ್ನು ಗಮನಕ್ಕೆ ತಂದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ, ಮಹಿಳೆಯರು ಕೆಲಸಕ್ಕೆ ಹೋಗಲು ಸಾಧ್ಯವಾಗದಿದ್ದರೆ ಮತ್ತು ಅಲ್ಲಿ ಕೆಲಸದ ಪರಿಸ್ಥಿತಿಗಳು, ವಾತಾವರಣ ಸುರಕ್ಷಿತವಾಗಿಲ್ಲದಿದ್ದರೆ ಮಹಿಳೆಯರಿಗೆ ಸಮಾನತೆ ಇಲ್ಲ ಎಂದರ್ಥ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ದೇಶಾದ್ಯಂತ ವೈದ್ಯರ ಸುರಕ್ಷತೆಯ ಬಗ್ಗೆ ಸಮಸ್ಯೆಯನ್ನು ಎದ್ದುಕಾಣುತ್ತಿದ್ದು, ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸಿಕೊಳ್ಳಲಾಗಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

ಘಟನೆಯನ್ನು ಗಮನಕ್ಕೆ ತಂದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ, ಮಹಿಳೆಯರು ಕೆಲಸಕ್ಕೆ ಹೋಗಲು ಸಾಧ್ಯವಾಗದಿದ್ದರೆ ಮತ್ತು ಅಲ್ಲಿ ಕೆಲಸದ ಪರಿಸ್ಥಿತಿಗಳು, ವಾತಾವರಣ ಸುರಕ್ಷಿತವಾಗಿಲ್ಲದಿದ್ದರೆ ಮಹಿಳೆಯರಿಗೆ ಸಮಾನತೆ ಇಲ್ಲ ಎಂದರ್ಥ.

ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿನಿರತ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಘಟನೆ ಮತ್ತು ಸಂಬಂಧಿತ ಸಮಸ್ಯೆ" ಎಂಬ ಶೀರ್ಷಿಕೆಯ ಪ್ರಕರಣದ ಸ್ವಯಂ ಪ್ರೇರಿತ ಕೇಸು ಈಗಾಗಲೇ ಕೋಲ್ಕತ್ತಾ ಹೈಕೋರ್ಟ್‌ನಲ್ಲಿದೆ ಎಂಬ ಅಂಶದ ದೃಷ್ಟಿಯಿಂದ ಮಹತ್ವದ್ದಾಗಿದೆ. ಕ್ರಮ ಮತ್ತು ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (CBI) ವರ್ಗಾಯಿಸಿದೆ.

ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರ ಮುಷ್ಕರ ಭಾನುವಾರಕ್ಕೆ ಒಂದು ವಾರ ಪೂರೈಸಿ ಎರಡನೇ ವಾರಕ್ಕೆ ಕಾಲಿಟ್ಟಿದ್ದು, ರೋಗಿಗಳಿಗೆ ವೈದ್ಯಕೀಯ ಸೇವೆಗೆ ತೊಂದರೆಯಾಗಿದೆ.

ಸಿಬಿಐ ತಪ್ಪಿತಸ್ಥರನ್ನು ಬಂಧಿಸಬೇಕು, ನ್ಯಾಯಾಲಯವು ಅವರಿಗೆ ಗರಿಷ್ಠ ಶಿಕ್ಷೆಯನ್ನು ವಿಧಿಸಬೇಕು ಎಂದು ಪ್ರತಿಭಟನಾನಿರತ ವೈದ್ಯರು ಒತ್ತಾಯಿಸಿದರು.

ಸುಪ್ರೀಂ ಕೋರ್ಟ್ ಪೀಠವು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೂ ಒಳಗೊಂಡಿದೆ. ಸರ್ಕಾರಿ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಆರೋಪ ದೇಶಾದ್ಯಂತ ಪ್ರತಿಭಟನೆಗೆ ಕಾರಣವಾಗಿತ್ತು.

ತೀವ್ರ ಗಾಯದ ಗುರುತುಗಳೊಂದಿಗೆ ವೈದ್ಯೆಯ ಶವ ಆಗಸ್ಟ್ 9 ರಂದು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಪತ್ತೆಯಾಗಿತ್ತು. ಮರುದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ಸ್ವಯಂಸೇವಕನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದರು.

ಆಗಸ್ಟ್ 13 ರಂದು ಕೋಲ್ಕತ್ತಾ ಹೈಕೋರ್ಟ್ ತನಿಖೆಯನ್ನು ಕೋಲ್ಕತ್ತಾ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಲು ಆದೇಶಿಸಿತು, ಅದು ಆಗಸ್ಟ್ 14 ರಂದು ತನಿಖೆಯನ್ನು ಪ್ರಾರಂಭಿಸಿತು.

ಸಂತ್ರಸ್ತೆಯ ಪೋಷಕರು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಮನವಿ ಮಾಡಿದ್ದು ಸೇರಿದಂತೆ ಅರ್ಜಿಗಳ ವಿಚಾರಣೆ ವೇಳೆ ಹೈಕೋರ್ಟ್ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com