ಬಾಂಬ್ ಬೆದರಿಕೆ ಕರೆ: ಕೇರಳದ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಸ್ಥಿತಿ ಹೇರಿಕೆ

ವಿಮಾನವು ಬೆಳಗ್ಗೆ 8 ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದ ವೇಳೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಅದನ್ನು ಪ್ರತ್ಯೇಕ ಕಡೆಗೆ ಸ್ಥಳಾಂತರಿಸಲಾಯಿತು. ಪ್ರಯಾಣಿಕರನ್ನು ವಿಮಾನದಿಂದ ಸ್ಥಳಾಂತರಿಸಲಾಗುತ್ತಿದೆ.
ಬಾಂಬ್ ಬೆದರಿಕೆ ಕರೆ: ಕೇರಳದ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಸ್ಥಿತಿ ಹೇರಿಕೆ
Updated on

ತಿರುವನಂತಪುರಂ: ಮುಂಬೈನಿಂದ ಬಂದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಇಂದು ಗುರುವಾರ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

135 ಪ್ರಯಾಣಿಕರಿದ್ದ ವಿಮಾನವನ್ನು ಬೆಳಿಗ್ಗೆ 8 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಿ ಪ್ರತ್ಯೇಕ ಕಡೆಗೆ ಸ್ಥಳಾಂತರಿಸಲಾಯಿತು. ಬೆಳಗ್ಗೆ 8.44ರ ವೇಳೆಗೆ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಹೊರತರಲಾಯಿತು.

ವಿಮಾನವು ತಿರುವನಂತಪುರಂ ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದಂತೆ ಪೈಲಟ್‌ ಗೆ ಬೆಳಗ್ಗೆ 7.30 ಕ್ಕೆ ಬಾಂಬ್ ಬೆದರಿಕೆ ಬಗ್ಗೆ ತಿಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ತರುವಾಯ, ಬೆಳಗ್ಗೆ 7.36 ಕ್ಕೆ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.

ಬೆದರಿಕೆಯ ಮೂಲದ ವಿವರಗಳು ಮತ್ತು ಇತರ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com