ಪ್ರಧಾನಿ ಮೋದಿ ಅನಾವರಣಗೊಳಿಸಿದ್ದ 35 ಅಡಿ ಎತ್ತರದ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತ, ವಿಡಿಯೋ ವೈರಲ್

ಕಳೆದ ವರ್ಷ ಡಿಸೆಂಬರ್ 4ರಂದು ನೌಕಾಪಡೆಯ ದಿನದಂದು ಪ್ರಧಾನಿ ಮೋದಿ ಅನಾವರಣಗೊಳಿಸಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯು ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಿದ್ದಿದೆ.
ಶಿವಾಜಿ ಮಹಾರಾಜ ಪ್ರತಿಮೆ ಕುಸಿತ
ಶಿವಾಜಿ ಮಹಾರಾಜ ಪ್ರತಿಮೆ ಕುಸಿತ
Updated on

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸೋಮವಾರ ಕುಸಿದು ಬಿದ್ದಿದೆ. ಈ ಪ್ರತಿಮೆಯನ್ನು ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದರು. ಸದ್ಯ ಪ್ರತಿಮೆ ಕುಸಿತಕ್ಕೆ ನಿಜವಾದ ಕಾರಣ ಏನು ಎಂಬುದು ದೃಢಪಟ್ಟಿಲ್ಲ, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ, ವಿರೋಧ ಪಕ್ಷಗಳು ಈ ಬಗ್ಗೆ ರಾಜ್ಯ ಸರ್ಕಾರವನ್ನು ಟೀಕಿಸಿವೆ ಮತ್ತು ಕಾಮಗಾರಿಯ ಗುಣಮಟ್ಟದ ಬಗ್ಗೆ ಕಡಿಮೆ ಗಮನ ಹರಿಸಿದೆ ಎಂದು ಆರೋಪಿಸಿದೆ.

ಕಳೆದ ವರ್ಷ ಡಿಸೆಂಬರ್ 4ರಂದು ನೌಕಾಪಡೆಯ ದಿನದಂದು ಪ್ರಧಾನಿ ಮೋದಿ ಅನಾವರಣಗೊಳಿಸಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯು ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಿದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕುಸಿತಕ್ಕೆ ನಿಖರ ಕಾರಣವನ್ನು ತಜ್ಞರು ಪತ್ತೆ ಹಚ್ಚಲಿದ್ದಾರೆ ಎಂದ ಅವರು, ಕಳೆದ ಎರಡ್ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಜೋರಾದ ಗಾಳಿ ಬೀಸುತ್ತಿದ್ದು, ಇದೂ ಕಾರಣವಾಗಿರಬಹುದು. ಪೊಲೀಸ್ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಅವಲೋಕನ ನಡೆಸಿದ್ದು, ಹಾನಿಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯ ಸರ್ಕಾರವು ಸರಿಯಾದ ಕಾಳಜಿ ವಹಿಸದ ಕಾರಣ ಈ ಕುಸಿತಕ್ಕೆ ಕಾರಣವಾಗಿದೆ. ಸರ್ಕಾರವು ಕಾಮಗಾರಿಯ ಗುಣಮಟ್ಟದ ಬಗ್ಗೆ ಬಹಳ ಕಡಿಮೆ ಗಮನ ಹರಿಸಿದೆ. 'ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರತಿಮೆ ಅನಾವರಣಗೊಳಿಸಲು ಆಹ್ವಾನಿಸಲಾಯಿತು. ಈ ಮಹಾರಾಷ್ಟ್ರ ಸರ್ಕಾರವು ಹೊಸ ಟೆಂಡರ್‌ಗಳನ್ನು ನೀಡಿ ಕಮಿಷನ್‌ ಪಡೆಯುತ್ತದೆ ಎಂದು ಮಾಜಿ ಸಚಿವ ಜಯಂತ್ ಪಾಟೀಲ್ ಆರೋಪಿಸಿದ್ದಾರೆ. ಶಿವಸೇನಾ (ಯುಬಿಟಿ) ಶಾಸಕ ವೈಭವ್ ನಾಯ್ಕ್ ಅವರು ಕಾಮಗಾರಿಯ ಕಳಪೆ ಗುಣಮಟ್ಟದ ಆರೋಪಕ್ಕಾಗಿ ರಾಜ್ಯ ಸರ್ಕಾರವನ್ನು ಟೀಕಿಸಿದರು. ರಾಜ್ಯ ಸರ್ಕಾರ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಬಹುದು. ಪ್ರತಿಮೆ ನಿರ್ಮಾಣ ಮತ್ತು ಸ್ಥಾಪನೆಗೆ ಕಾರಣರಾದವರನ್ನು ಕೂಲಂಕುಷವಾಗಿ ತನಿಖೆ ಮಾಡಬೇಕು ಎಂದರು.

ಶಿವಾಜಿ ಮಹಾರಾಜ ಪ್ರತಿಮೆ ಕುಸಿತ
ಮಹಾರಾಷ್ಟ್ರದ ಏಕೈಕ ಕಾಂಗ್ರೆಸ್ ಸಂಸದ ನಿಧನ

ಹೊಸ ಪ್ರತಿಮೆ ಸ್ಥಾಪನೆಗೆ ಬದ್ಧ: ಸಚಿವ

ಘಟನೆಯ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ ಎಂದು ಮಹಾರಾಷ್ಟ್ರ ಸಚಿವ ದೀಪಕ್ ಕೇಸರ್ಕರ್ ಹೇಳಿದ್ದಾರೆ. ಆದರೆ, ಸಿಂಧುದುರ್ಗ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಪಿಡಬ್ಲ್ಯುಡಿ ಸಚಿವ ರವೀಂದ್ರ ಚವ್ಹಾಣ್ ಅವರು ಈ ಬಗ್ಗೆ ಸಂಪೂರ್ಣ ತನಿಖೆ ನಡೆಸುವುದಾಗಿ ಹೇಳಿರುವುದು ಗಮನಿಸಬೇಕಾದ ಸಂಗತಿ. ಅದೇ ಸ್ಥಳದಲ್ಲಿ ಹೊಸ ಪ್ರತಿಮೆಯನ್ನು ಸ್ಥಾಪಿಸಲು ನಾವು ಬದ್ಧರಾಗಿದ್ದೇವೆ. ಪ್ರಧಾನಿ ಮೋದಿ ಅವರು ಅನಾವರಣಗೊಳಿಸಿದರು. ಇದನ್ನು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ನಿರ್ಮಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಶಿವಾಜಿ ಮಹಾರಾಜರ ದೂರದೃಷ್ಟಿಯ ಪ್ರಯತ್ನಗಳಿಗೆ ಗೌರವ ಸಲ್ಲಿಸುತ್ತೇವೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com