ವಯನಾಡು ಭೂ ಕುಸಿತ: ಪುನರ್ವಸತಿ ಕಾರ್ಯಕ್ಕೆ ಉತ್ತರ ಪ್ರದೇಶ ಸರ್ಕಾರದಿಂದ 10 ಕೋಟಿ ರೂ. ಮಂಜೂರು

ವಯನಾಡಿನಲ್ಲಿ ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳಲ್ಲಿ ಕೇರಳ ಸರ್ಕಾರಕ್ಕೆ ನೆರವಾಗಲು ಯುಪಿ ಸರ್ಕಾರ 10 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಯನಾಡು ಭೂಕುಸಿತ ಪ್ರದೇಶ,ಯೋಗಿ ಆದಿತ್ಯನಾಥ್ ಸಾಂದರ್ಭಿಕ ಚಿತ್ರ
ವಯನಾಡು ಭೂಕುಸಿತ ಪ್ರದೇಶ,ಯೋಗಿ ಆದಿತ್ಯನಾಥ್ ಸಾಂದರ್ಭಿಕ ಚಿತ್ರ
Updated on

ಲಖನೌ: ಜುಲೈ 30 ರಂದು ಸಂಭವಿಸಿದ ವಿನಾಶಕಾರಿ ಭೂಕುಸಿತದಿಂದ ಹಾನಿಗೊಳಗಾದ ಕೇರಳದ ವಯನಾಡಿನಲ್ಲಿ ಪುನರ್ವಸತಿ ಕಾರ್ಯಕ್ಕಾಗಿ ಉತ್ತರ ಪ್ರದೇಶ ಸರ್ಕಾರ 10 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಕೇರಳದ ನಾಗರಿಕರು ಮತ್ತು ಸರ್ಕಾರಕ್ಕೆ ತಮ್ಮ ಬೆಂಬಲವನ್ನು ನೀಡಿದ್ದಾರೆ.

ವಯನಾಡಿನಲ್ಲಿ ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳಲ್ಲಿ ಕೇರಳ ಸರ್ಕಾರಕ್ಕೆ ನೆರವಾಗಲು ಯುಪಿ ಸರ್ಕಾರ 10 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಯನಾಡು ಭೂಕುಸಿತ ಪ್ರದೇಶ,ಯೋಗಿ ಆದಿತ್ಯನಾಥ್ ಸಾಂದರ್ಭಿಕ ಚಿತ್ರ
ವಯನಾಡು ಭೂಕುಸಿತ: 401 ಮೃತದೇಹಗಳ ಡಿಎನ್ಎ ಪರೀಕ್ಷೆ ಪೂರ್ಣ

ಜುಲೈ 30 ರಂದು ಮೆಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 47.31 ಕಿ.ಮೀ ವ್ಯಾಪ್ತಿಯಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 400ಕ್ಕೂ ಹೆಚ್ಚಿದೆ. ಚೂರಲ್ಮಲಾ, ಮುತಂಗಾ ಮತ್ತು ಮುಂಡಕ್ಕೈ ನಲ್ಲಿ ಅಪಾರ ಪ್ರಮಾಣದಲ್ಲಿ ಆಸ್ತಿ-ಪಾಸ್ತಿ ಜೀವಹಾನಿಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com