ಅಸ್ಸಾಂ ಸಿಎಂ Himanta Biswa Sarma ವಿರುದ್ಧ ವಿಪಕ್ಷಗಳಿಂದ FIR

ಹಿಮಂತ ಶರ್ಮಾ ಅವರು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಇದು ರಾಜ್ಯದಲ್ಲಿ ಕೋಮು ಗಲಭೆಯಂತಹ ಪರಿಸ್ಥಿತಿಗೆ ಕಾರಣವಾಗಬಹುದು.
Himanta Biswa Sarma
ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
Updated on

ಗುವಾಹತಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಅಸ್ಸಾಂನ ವಿರೋಧ ಪಕ್ಷಗಳು ಬುಧವಾರ ದೂರು ದಾಖಲಿಸಿದ್ದು, ಧರ್ಮ ಮತ್ತು ಜಾತಿಯ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿವೆ.

ಹಿಮಂತ ಶರ್ಮಾ ಅವರು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಇದು ರಾಜ್ಯದಲ್ಲಿ ಕೋಮು ಗಲಭೆಯಂತಹ ಪರಿಸ್ಥಿತಿಗೆ ಕಾರಣವಾಗಬಹುದು ಎಂದು ಅವರು ಆರೋಪಿಸಿವೆ.

ಅಸ್ಸಾಂನ ಸಂಯುಕ್ತ ವಿರೋಧ ಪಕ್ಷಗಳ ವೇದಿಕೆಯ (ಯುಒಎಫ್‌ಎ) ಪ್ರಧಾನ ಕಾರ್ಯದರ್ಶಿ ಲುರಿಂಜ್ಯೋತಿ ಗೊಗೊಯ್ ಅವರು ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗೊಗೊಯ್ ಅವರೊಂದಿಗೆ ವೇದಿಕೆಯ ಇತರ ಪಕ್ಷಗಳ ನಾಯಕರು ಕೂಡ ಉಪಸ್ಥಿತರಿದ್ದರು. UofA ಅಸ್ಸಾಂನಲ್ಲಿ 18 ಪಕ್ಷಗಳ ಮೈತ್ರಿಕೂಟವಾಗಿದೆ.

ಸಿಎಂ ಆಗಿದ್ದೂ ಧ್ವೇಷ ಪ್ರಚೋದನೆ

“ಧರ್ಮ ಮತ್ತು ಜಾತಿಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ವೈಷಮ್ಯವನ್ನು ಉತ್ತೇಜಿಸಲು ಪ್ರಯತ್ನಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಹಿಮಂತ ವಿಶ್ವ ಶರ್ಮಾ ವಿರುದ್ಧ ನಾವು ಈ ಎಫ್‌ಐಆರ್ ದಾಖಲಿಸುತ್ತಿದ್ದೇವೆ. ಪೊಲೀಸ್ ಠಾಣೆಯ ಅಧಿಕಾರಿಗಳು ದೂರನ್ನು ಸ್ವೀಕರಿಸಿದ್ದಾರೆ, ಆದರೆ ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಧಿಂಗ್‌ನಲ್ಲಿ 14 ವರ್ಷದ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವನ್ನು ಉಲ್ಲೇಖಿಸಿದ UofA, ಶರ್ಮಾ ಅವರು "ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮು ಉನ್ಮಾದವನ್ನು ಪ್ರಚೋದಿಸಲು ಸಿಎಂ ಹಿಮಂತ ಬಿಸ್ವ ಶರ್ಮಾ ಪ್ರಯತ್ನಿಸುತ್ತಿದ್ದಾರೆ. ಇದು ಶಿವಸಾಗರದಲ್ಲಿ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಕೆಲವು ಜನರ ಮೇಲೆ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಂದ ಹಲ್ಲೆಗೆ ಕಾರಣವಾಗಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಅಂತೆಯೇ ರಾಜ್ಯದಲ್ಲಿ ಗಲಭೆಯಂತಹ ಪರಿಸ್ಥಿತಿಯನ್ನು ಸೃಷ್ಟಿಸುವ ಪಿತೂರಿಯ ಭಾಗವಾಗಿ ಇದನ್ನು ಮಾಡಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಹಿಮಂತ ಬಿಸ್ವ ಶರ್ಮಾ ಮತ್ತು ಇತರ ಬಿಜೆಪಿ ನಾಯಕರು ಅಶಾಂತಿಯ ವಾತಾವರಣವನ್ನು ಸೃಷ್ಟಿಸುವ ಕ್ರಿಮಿನಲ್ ಪಿತೂರಿಯ ಭಾಗವಾಗಿದೆ. ನಿರ್ದಿಷ್ಟ ಸಮುದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಇತಿಹಾಸವನ್ನು ಶರ್ಮಾ ಹೊಂದಿದ್ದಾರೆ ಎಂದು UofA ಆರೋಪಿಸಿದೆ.

Himanta Biswa Sarma
'ನಾನು ಪಕ್ಷಪಾತಿನೇ', ಅಸ್ಸಾಂ ಅನ್ನು ಮಿಯಾ ಮುಸ್ಲಿಮರು ವಶಪಡಿಸಿಕೊಳ್ಳಲು ಬಿಡಲ್ಲ: ಸಿಎಂ ಹಿಮಂತ ಬಿಸ್ವಾ ಶರ್ಮಾ

ಒಂದು ವರ್ಷದ ಹಿಂದೆ ಮುಖ್ಯಮಂತ್ರಿ ಹಿಮಂತ ಬಿಸ್ವ ಗುವಾಹತಿಯ 'ಮಿಯಾನ್ಸ್' ಎಂದು ಕರೆಯುವ ನಿರ್ದಿಷ್ಟ ಧಾರ್ಮಿಕ ಸಮುದಾಯದ ವ್ಯಕ್ತಿಗಳನ್ನು ಓಡಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದ್ದರು ಅದು ಉಲ್ಲೇಖಿಸಿದೆ. 'ಮಿಯಾನ್' ಎಂಬ ಪದವನ್ನು ಬಂಗಾಳಿ-ಮಾತನಾಡುವ ಮುಸ್ಲಿಂ ಸಮುದಾಯದ ಜನರಿಗೆ ಅವಹೇಳನಕಾರಿ ಪದವಾಗಿ ಬಳಸಲಾಗಿದೆ ಮತ್ತು ಬಂಗಾಳಿ-ಮಾತನಾಡದ ಜನರು ಸಾಮಾನ್ಯವಾಗಿ ಅವರನ್ನು ಬಾಂಗ್ಲಾದೇಶಿ ವಲಸಿಗರು ಎಂದು ಕರೆಯುತ್ತಾರೆ.

ಕಳೆದ ಕೆಲವು ವರ್ಷಗಳಲ್ಲಿ, ಬಂಗಾಳಿ ಮಾತನಾಡದ ಸಮುದಾಯದ ಜನರು ಈ ಪದವನ್ನು ಬಳಸಲು ಪ್ರಾರಂಭಿಸಿದ್ದಾರೆ. ಅಂತಹ ವ್ಯಕ್ತಿಯನ್ನು (ಹಿಮಂತ್ ವಿಶ್ವ ಶರ್ಮಾ) ತಕ್ಷಣವೇ ಬಂಧಿಸಿ ನಿಯಂತ್ರಿಸದಿದ್ದರೆ, ರಾಜಕೀಯ ಲಾಭ ಪಡೆಯಲು ರಾಜ್ಯದಲ್ಲಿ ಗಲಭೆಯಂತಹ ಪರಿಸ್ಥಿತಿಯನ್ನು ಸೃಷ್ಟಿಸಬಹುದು ಎಂದು ದೂರಿನಲ್ಲಿ ಹೇಳಲಾಗಿದೆ.

“ಆದ್ದರಿಂದ, ಆರೋಪಿ (ಹಿಮಂತ ಬಿಸ್ವ ಶರ್ಮಾ) ಮತ್ತು ಅವನ ಸಹ-ಸಂಚುಕೋರರ ವಿರುದ್ಧ ಸೆಕ್ಷನ್ 61, 196 ರ ಅಡಿಯಲ್ಲಿ ಕ್ರಮ ಕೈಗೊಳ್ಳಲು ಮತ್ತು 35 (2) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲು ತನಿಖೆಗೊಳಪಡಿಸಲು ನಾವು ನಿಮ್ಮನ್ನು ಕೋರುತ್ತೇವೆ ಎಂದು ದೂರಿನಲ್ಲಿ ಹೇಳಲಾಗಿದೆ.

UofA ಅಸ್ಸಾಂನಲ್ಲಿ 18 ಪಕ್ಷಗಳ ಮೈತ್ರಿಕೂಟವಾಗಿದ್ದು, ಕಾಂಗ್ರೆಸ್ 11-ಪಕ್ಷಗಳ UOF ಅನ್ನು ಮುನ್ನಡೆಸುತ್ತಿದೆ. ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಹೊರತುಪಡಿಸಿ ಎಲ್ಲಾ ಪ್ರಮುಖ ವಿರೋಧ ಪಕ್ಷಗಳು ಅದರ ಭಾಗವಾಗಿವೆ. ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ಭೂಪೇನ್ ಬೋರಾ ಮತ್ತು ಗೊಗೊಯ್ ಅವರು ಈ ದೂರಿನಲ್ಲಿ ಸಹಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com