ಒಡಿಶಾ: ನೌಕಾಪಡೆಯ ಹೆಲಿಕಾಪ್ಟರ್ ಗದ್ದೆಯಲ್ಲಿ ತುರ್ತು ಭೂಸ್ಪರ್ಶ

ಲ್ಯಾಂಡಿಂಗ್ ನಂತರ, ಪೈಲಟ್ ಹೆಲಿಕಾಪ್ಟರ್‌ನಿಂದ ಹೊರಬಂದು ಅದನ್ನು ಪರಿಶೀಲಿಸಿದರು ಮತ್ತು ಸುಮಾರು 30-40 ನಿಮಿಷಗಳ ನಂತರ ಹೆಲಿಕಾಪ್ಟರ್ ಸ್ಥಳದಿಂದ ನಿರ್ಗಮಿಸಿತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಯೂರ್‌ಭಂಜ್: ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಬುಧವಾರ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಗದ್ದೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಲಿಕಾಪ್ಟರ್ ರಸ್ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಮಾಡ ಗ್ರಾಮದಲ್ಲಿ ತರ್ತು ಭೂಸ್ಪರ್ಶ ಮಾಡಿದ್ದು, ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರು ತೀವ್ರ ಆಘಾತಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಲ್ಯಾಂಡಿಂಗ್ ನಂತರ, ಪೈಲಟ್ ಹೆಲಿಕಾಪ್ಟರ್‌ನಿಂದ ಹೊರಬಂದು ಅದನ್ನು ಪರಿಶೀಲಿಸಿದರು ಮತ್ತು ಸುಮಾರು 30-40 ನಿಮಿಷಗಳ ನಂತರ ಹೆಲಿಕಾಪ್ಟರ್ ಸ್ಥಳದಿಂದ ನಿರ್ಗಮಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ತಪ್ಪಿದ ಅನಾಹುತ: ತಾಂತ್ರಿಕ ದೋಷ; IAF ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ!

ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳಿಂದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಪೈಲಟ್ ತಾಂತ್ರಿಕ ಸಮಸ್ಯೆ ಸರಿಪಡಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವರುಣ್ ಗುಂಟುಪಲ್ಲಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com