ಜಮ್ಮು-ಕಾಶ್ಮೀರ: ಸಹೋದ್ಯೋಗಿಗೆ ಗುಂಡಿಕ್ಕಿ ಕೊಂದ ಪೊಲೀಸ್​ ತಾನೂ ಆತ್ಮಹತ್ಯೆ

ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಸೋದರ ಸಂಬಂಧಿಯಾಗಿದ್ದು, ಹತ್ಯೆ ಹಾಗೂ ಆತ್ಮಹತ್ಯೆ ಪ್ರಕರಣ ಎಂದು ತಿಳಿದು ಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ಕಾಳಿ ಮಠ ದೇವಾಲಯದ ಬಳಿ ವಾಹನವೊಂದರಲ್ಲಿ ಇಬ್ಬರು ಪೊಲೀಸರ ಮೃತದೇಹಗಳು ಪತ್ತೆಯಾಗಿದ್ದು, ಮೃತದೇಹದ ಮೇಲೆ ವ ಗುಂಡೇಟಿನ ಗಾಯಗಳು ಪತ್ತೆಯಾಗಿವೆ.

ಇಬ್ಬರೂ ಪೊಲೀಸ್ ಸಿಬ್ಬಂದಿಗಳು ಸೋಪೋರ್‌ನಿಂದ ಉಧಂಪುರದ ತಲ್ವಾರದಲ್ಲಿರುವ ತರಬೇತಿ ಕೇಂದ್ರಕ್ಕೆ ತೆರಳುತ್ತಿದ್ದಾಗ ಬೆಳಗ್ಗೆ 6.30ರ ಸುಮಾರಿದೆ ಘಟನೆ ನಡೆದಿದೆ ಎಂದು ಎಸ್‌ಎಸ್‌ಪಿ ಉಧಂಪುರ ಅಮೋದ್ ಅಶೋಕ್ ನಾಗ್‌ಪುರೆ ಅವರು ಹೇಳಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಘಟನೆಯಲ್ಲಿ ಎಕೆ -47 ರೈಫಲ್ ಬಳಸಿರುವುದು ಸಾಬೀತಾಗಿದೆ. ಇಬ್ಬರು ಇದು ಸೋದರ ಸಂಬಂಧಿಯಾಗಿದ್ದು, ಹತ್ಯೆ ಮತ್ತು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ ಎಂದು ತಿಳಿಸಿದ್ದಾರೆ.

ದಾಳಿಗೂ ಮುನ್ನ ಇಬ್ಬರ ನಡುವೆ ಜಗಳವಾಗಿದೆ. ಆರೋಪಿಯು ತನ್ನ ಎಕೆ 47 ಅಸಾಲ್ಟ್​ ರೈಫಲ್​ ಅನ್ನು ದಾಳಿಗೆ ಬಳಸಿದ್ದಾನೆ. ಘಟನೆಯಲ್ಲಿ ಇಬ್ಬರಿಗೆ ಮಾರಣಾಂತಿಕ ಗಾಯಗಳಾಗಿವೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಆಯ್ಕೆ ದರ್ಜೆಯ ಕಾನ್​ಸ್ಟೇಬಲ್​ ಪ್ರಾಣಾಪಾಯದಿಂದ ಪಾರಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಉಧಂಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಮೋದ್ ಅಶೋಕ್ ನಾಗ್ಪುರೆ ತಿಳಿಸಿದ್ದಾರೆ.

ಸಂಗ್ರಹ ಚಿತ್ರ
ಜಮ್ಮು-ಕಾಶ್ಮೀರ: ಹತ್ಯೆಯಾದ ವಿಡಿಜಿಗಳ ಮೃತದೇಹ ಪತ್ತೆ; ಕಿಶ್ತ್ವಾರ್‌ನಲ್ಲಿ ಉಗ್ರರಿಗಾಗಿ ಶೋಧ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com