ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡಿದ ಫಡ್ನವಿಸ್

ಇಂದು ವಿಧಾನಸಭೆಯಲ್ಲಿ ಶಿವಸೇನಾ ಶಾಸಕ ಉದಯ್ ಸಾಮಂತ್ ಮತ್ತು ಇತರರು ಮಂಡಿಸಿದ ವಿಶ್ವಾಸಮತ ಯಾಚನೆಯನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು.
ದೇವೇಂದ್ರ ಫಡ್ನವಿಸ್, ಏಕನಾಥ್ ಶಿಂಧೆ, ಅಜಿತ್ ಪವಾರ್
ದೇವೇಂದ್ರ ಫಡ್ನವಿಸ್, ಏಕನಾಥ್ ಶಿಂಧೆ, ಅಜಿತ್ ಪವಾರ್
Updated on

ಮುಂಬೈ: ದೇವೇಂದ್ರ ಫಡ್ನವಿಸ್ ನೇತೃತ್ವದ ಮಹಾಯುತಿ ಸರ್ಕಾರ ಸೋಮವಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡಿದೆ.

ಇಂದು ವಿಧಾನಸಭೆಯಲ್ಲಿ ಶಿವಸೇನಾ ಶಾಸಕ ಉದಯ್ ಸಾಮಂತ್ ಮತ್ತು ಇತರರು ಮಂಡಿಸಿದ ವಿಶ್ವಾಸಮತ ಯಾಚನೆಯನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು.

ವಿಶ್ವಾಸಮತ ಯಾಚನೆಗೆ ಸದನ ಅನುಮೋದನೆ ನೀಡಿದೆ ಎಂದು ಸ್ಪೀಕರ್ ರಾಹುಲ್ ನಾರ್ವೇಕರ್ ಘೋಷಿಸಿದರು.

288 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ-ಶಿವಸೇನೆ-ಎನ್‌ಸಿಪಿ 'ಮಹಾಯುತಿ' ಒಕ್ಕೂಟವು 230 ಸ್ಥಾನಗಳ ಬಹುಮತ ಹೊಂದಿದೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ 144 ಶಾಸಕರ ಬೆಂಬಲದ ಅಗತ್ಯ ಇದೆ.

ದೇವೇಂದ್ರ ಫಡ್ನವಿಸ್, ಏಕನಾಥ್ ಶಿಂಧೆ, ಅಜಿತ್ ಪವಾರ್
ಮಹಾರಾಷ್ಟ್ರ: ವಿಧಾನಸಭೆ ನೂತನ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆ

"ವಿಶ್ವಾಸಮತ ಬಹುಮತದೊಂದಿಗೆ ಅಂಗೀಕಾರವಾಗಿದೆ. ವಿಧಾನಸಭೆ ಈಗ ಮುಂದೂಡಲ್ಪಡುತ್ತದೆ ಮತ್ತು ಮಹಾರಾಷ್ಟ್ರ ರಾಜ್ಯಪಾಲರ ಭಾಷಣದ ನಂತರ ಪುನರಾರಂಭವಾಗಲಿದೆ" ಎಂದು ನಾರ್ವೇಕರ್ ವಿಧಾನಸಭೆಯಲ್ಲಿ ಹೇಳಿದರು.

ಫಡ್ನವಿಸ್ ಅವರು ಡಿಸೆಂಬರ್ 5 ರಂದು ಮೂರನೇ ಬಾರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದ ಅದ್ಧೂರಿ ಸಮಾರಂಭದಲ್ಲಿ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com