ವಯನಾಡು ಭೂಕುಸಿತ ಸಂತ್ರಸ್ತರಿಗೆ 100 ಮನೆ ಕಟ್ಟಲು ಭೂಮಿ ನೀಡಿ: ಕೇರಳ ಸಿಎಂಗೆ ಸಿದ್ದರಾಮಯ್ಯ ಪತ್ರ

ಸಂತ್ರಸ್ತ ಕುಟುಂಬಗಳಿಗೆ 100 ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದೇವೆ. ಭರವಸೆಯನ್ನು ಈಡೇರಿಸಲು ಇನ್ನೂ ಸಿದ್ಧರಿದ್ದೇವೆ ಎಂದು ಸಿಎಂ ಪತ್ರದಲ್ಲಿ ತಿಳಿಸಿದ್ದಾರೆ.
Wayanad Landslide
ವಯನಾಡು ಭೂಕುಸಿತ
Updated on

ಬೆಂಗಳೂರು: ವಿನಾಶಕಾರಿ ಭೂಕುಸಿತದಿಂದ ಹಾನಿಗೊಳಗಾದ ಕುಟುಂಬಗಳಿಗೆ ವಯನಾಡಿನಲ್ಲಿ ಮನೆ ನಿರ್ಮಿಸಲು ತಮ್ಮ ಸರ್ಕಾರ ಭೂಮಿ ಖರೀದಿಸಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ.

ಡಿಸೆಂಬರ್ 9 ರಂದು ಕೇರಳ ಸಿಎಂಗೆ ಬರೆದ ಪತ್ರವನ್ನು ಸಿಎಂ ಸಿದ್ದರಾಮಯ್ಯ ಇಂದು ಹಂಚಿಕೊಂಡಿದ್ದು, ಸಂತ್ರಸ್ತ ಕುಟುಂಬಗಳಿಗೆ 100 ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದೇವೆ. ಭರವಸೆಯನ್ನು ಈಡೇರಿಸಲು ಇನ್ನೂ ಸಿದ್ಧರಿದ್ದೇವೆ ಎಂದು ಸಿಎಂ ಪತ್ರದಲ್ಲಿ ತಿಳಿಸಿದ್ದಾರೆ.

ನಮ್ಮ ಸರ್ಕಾರದ ಈ ಉಪಕ್ರಮವು ತಮ್ಮ ಮನೆ, ಜೀವನೋಪಾಯ ಮತ್ತು ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸುರಕ್ಷಿತ ಮತ್ತು ಸ್ಥಿರವಾದ ವಾತಾವರಣವನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಸಿದ್ದರಾಮಯ್ಯ ಒತ್ತಿ ಹೇಳಿದರು.

Wayanad Landslide
ವಯನಾಡು ಭೂಕುಸಿತ: 401 ಮೃತದೇಹಗಳ ಡಿಎನ್ಎ ಪರೀಕ್ಷೆ ಪೂರ್ಣ

ಹೆಚ್ಚಿನ ಸಮನ್ವಯಕ್ಕಾಗಿ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪ್ರಕಟಣೆಯನ್ನು ತಿಳಿಸಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಆದಾಗ್ಯೂ, ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯವಾದ ಮಾರ್ಗಸೂಚಿಗಳು ಅಥವಾ ನಿರ್ದೇಶನಗಳ ಬಗ್ಗೆ ಕೇರಳ ಸರ್ಕಾರದಿಂದ ಸಂವಹನದ ಕೊರತೆಯಿಂದಾಗಿ ಯೋಜನೆ ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಸಿಎಂ ಕಳವಳ ವ್ಯಕ್ತಪಡಿಸಿದ್ದಾರೆ.

"ಈ ಉಪಕ್ರಮವನ್ನು ಸುಲಭಗೊಳಿಸಲು, ಸಂತ್ರಸ್ತ ಕುಟುಂಬಗಳಿಗೆ ತ್ವರಿತ ಪರಿಹಾರವನ್ನು ಖಾತರಿಪಡಿಸುವ ಮೂಲಕ ಮನೆಗಳನ್ನು ನಿರ್ಮಿಸಲು ಅಗತ್ಯವಿರುವ ಭೂಮಿಯನ್ನು ಖರೀದಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ ಎಂದು ನಾನು ತಿಳಿಸಲು ಬಯಸುತ್ತೇನೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com