ರೈತರ 'ದಿಲ್ಲಿ ಚಲೋ' ಪಾದಯಾತ್ರೆ ಡಿಸೆಂಬರ್ 14 ರಂದು ಪುನರಾರಂಭ

ಸರ್ಕಾರದ ಕಡೆಯಿಂದ ಮಾತುಕತೆಗೆ ಯಾವುದೇ ಸಂದೇಶ ಬಂದಿಲ್ಲವಾದ್ದರಿಂದ ಪ್ರತಿಭಟನಾ ನಿರತ ರೈತರು ಡಿಸೆಂಬರ್ 14 ರಂದು ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲಿದ್ದಾರೆ.
ರೈತರ ಪ್ರತಿಭಟನೆ(ಸಂಗ್ರಹ ಚಿತ್ರ)
ರೈತರ ಪ್ರತಿಭಟನೆ(ಸಂಗ್ರಹ ಚಿತ್ರ)ANI photos
Updated on

ಚಂಡೀಗಢ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್​ಪಿ)ಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಡಿಸೆಂಬರ್ 14 ರಂದು 'ದಿಲ್ಲಿ ಚಲೋ' ಪುನರಾರಂಭಿಸಲಿದ್ದಾರೆ ಎಂದು ಪಂಜಾಬ್ ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಅವರು ಮಂಗಳವಾರ ಹೇಳಿದ್ದಾರೆ.

ಸರ್ಕಾರದ ಕಡೆಯಿಂದ ಮಾತುಕತೆಗೆ ಯಾವುದೇ ಸಂದೇಶ ಬಂದಿಲ್ಲವಾದ್ದರಿಂದ ಪ್ರತಿಭಟನಾ ನಿರತ ರೈತರು ಡಿಸೆಂಬರ್ 14 ರಂದು ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲಿದ್ದಾರೆ ಎಂದು ಪಂಧೇರ್ ತಿಳಿಸಿದ್ದಾರೆ.

ಇಂದು ನಡೆದ ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸಭೆಯಲ್ಲಿ 'ದಿಲ್ಲಿ ಚಲೋ' ಪಾದಯಾತ್ರೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ರೈತರ ಪ್ರತಿಭಟನೆ(ಸಂಗ್ರಹ ಚಿತ್ರ)
ದೆಹಲಿ ಚಲೋ: ಶಂಭು ಗಡಿಯಲ್ಲಿ ಹರಿಯಾಣ ಪೊಲೀಸರಿಂದ ರೈತರ ಮೇಲೆ ಅಶ್ರುವಾಯು ಪ್ರಯೋಗ

ಶಂಭು ಗಡಿ ಪ್ರತಿಭಟನಾ ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಂಧೇರ್, "ರೈತರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸರ್ಕಾರದೊಂದಿಗೆ ಮಾತುಕತೆ ನಡೆಸಲು ಬಯಸುವುದಿಲ್ಲ ಎಂದು ದೂರುವುದು ಸರಿಯಲ್ಲ. ನಾವು ಸಮಯ ನೀಡಿದ್ದೇವೆ ... ಆದರೆ ಮಾತುಕತೆಗಾಗಿ ಸರ್ಕಾರ(ಕೇಂದ್ರ)ದ ಕಡೆಯಿಂದ ಯಾವುದೇ ಸಂದೇಶ ಬಂದಿಲ್ಲ" ಎಂದರು.

"ಈಗ, ಎರಡೂ ವೇದಿಕೆಗಳು ತೆಗೆದುಕೊಂಡ ನಿರ್ಧಾರದಂತೆ 101 ರೈತರ ನಮ್ಮ ಮುಂದಿನ ಜಾಥಾ ಶಂಭು ಗಡಿಯಿಂದ ಡಿಸೆಂಬರ್ 14 ರಂದು ದೆಹಲಿಗೆ ಹೊರಡಲಿದೆ" ಎಂದು ಅವರು ಹೇಳಿದರು.

ಪಂಜಾಬ್-ಹರಿಯಾಣ ಗಡಿಯಲ್ಲಿ ಭದ್ರತಾ ಸಿಬ್ಬಂದಿ ಹಾರಿಸಿದ ಅಶ್ರುವಾಯು ಶೆಲ್‌ಗಳಿಂದ ಕೆಲವರು ಗಾಯಗೊಂಡ ನಂತರ ಪ್ರತಿಭಟನಾನಿರತ ರೈತರು ಶುಕ್ರವಾರ ರಾಷ್ಟ್ರ ರಾಜಧಾನಿಗೆ ತಮ್ಮ ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com