ಇತರರಿಗಾಗಿ ದಣಿವರಿಯದೇ ಶ್ರಮಿಸಿದ ನಾಯಕ: ಎಸ್‌.ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಎಸ್.ಎಂ.ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಕೃಷ್ಣ ಅವರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡು, ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ಮೋದಿ ಹಾಗೂ ಎಸ್.ಎಂ.ಕೃಷ್ಣ (ಸಂಗ್ರಹ ಚಿತ್ರ)
ಪ್ರಧಾನಿ ಮೋದಿ ಹಾಗೂ ಎಸ್.ಎಂ.ಕೃಷ್ಣ (ಸಂಗ್ರಹ ಚಿತ್ರ)
Updated on

ನವದೆಹಲಿ: ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೇ ಶ್ರಮಿಸಿದ್ದ ನಾಯಕ ಎಸ್.ಎಂ.ಕೃಷ್ಣ. ಅವರ ನಿಧನ ಅತೀವ ದುಃಖ ತಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ.

ಎಸ್.ಎಂ.ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕೃಷ್ಣ ಅವರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡು, ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ಮೋದಿ ಹಾಗೂ ಎಸ್.ಎಂ.ಕೃಷ್ಣ (ಸಂಗ್ರಹ ಚಿತ್ರ)
ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ

ಎಸ್ಎಂ ಕೃಷ್ಣ ನಿಧನ ಅತೀವ ದುಃಖ ತಂದಿದೆ. ಕಳೆದ ಕೆಲ ವರ್ಷಗಳಲ್ಲಿ ಎಸ್ಎಂ ಕೃಷ್ಣ ಅವರ ಜೊತೆ ಮಾತನಾಡುವ, ಭೇಟಿ ಮಾಡುವ ಅವಕಾಶ ನನ್ನ ಪಾಲಿಗೆ ಒದಗಿ ಬಂದಿತ್ತು. ಅವರ ಕುಟುಂಬಕ್ಕೆ ಹಾಗೂ ಅಭಿಮಾನಿ ಬಳಗಕ್ಕೆ ಸಂತಾಪ ಸೂಚಿಸುತ್ತೇನೆ.

ಎಸ್ಎಂ ಕೃಷ್ಣ ಅಪ್ರತಿಮ ನಾಯಕನಾಗಿದ್ದರು. ಸಮಾಜ ಎಲ್ಲಾ ವರ್ಗದ ಜನರಿಂದ ಮೆಚ್ಚುಗೆಗೆ ಹಾಗೂ ಗೌರವಕ್ಕೆ ಪಾತ್ರರಾಗಿದ್ದ ನಾಯಕ. ಸಮಾಜ ಪ್ರತಿಯೊಬ್ಬರ ಜೀವನ ಸುಧಾರಣೆಗೆ ದಣಿವರಿಯದೇ ಶ್ರಮಿಸಿದ ನಾಯಕ ಎಸ್ಎಂ ಕೃಷ್ಣ. ಕರ್ನಾಟಕ ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ಮೂಲಭೂತ ಸೌಕರ್ಯದಲ್ಲಿ ಅಮೂಲಾಗ್ರ ಬದಲಾವಣೆಗೆ ನಾಂದಿ ಹಾಡಿದ್ದರು. ವಿಶೇಷ ಅಂದರೆ ಎಸ್ಎಂ ಕೃಷ್ಣ ಓದುಗ ಹಾಗೂ ಚಿಂತರಾಗಿದ್ದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com