ಛತ್ತೀಸ್‌ಗಢ: ನಕ್ಸಲರಿಂದ ಬಿಜಾಪುರದಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ

ಪೊಲೀಸ್ ಮಾಹಿತಿದಾರನಂತೆ ವರ್ತಿಸುತ್ತಿದ್ದಾರೆ ಎಂಬ ಕಾರಣಕ್ಕೆ ಬಿಜೆಪಿ ಕಾರ್ಯಕರ್ತ ಕುಡಿಯಮ್ ಮಾಡೋ ಅವರನ್ನು ನಕ್ಸಲರು ಮಂಗಳವಾರ ರಾತ್ರಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 35 ವರ್ಷದ ಬಿಜೆಪಿ ಕಾರ್ಯಕರ್ತನನ್ನು ನಕ್ಸಲೀಯರು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಕಳೆದ ಏಳು ದಿನಗಳಲ್ಲಿ ಜಿಲ್ಲೆಯಲ್ಲಿ ನಕ್ಸಲರಿಂದ ಐದನೇ ನಾಗರಿಕ ಹತ್ಯೆ ಇದಾಗಿದೆ.

ಪೊಲೀಸ್ ಮಾಹಿತಿದಾರನಂತೆ ವರ್ತಿಸುತ್ತಿದ್ದಾರೆ ಎಂಬ ಕಾರಣಕ್ಕೆ ಬಿಜೆಪಿ ಕಾರ್ಯಕರ್ತ ಕುಡಿಯಮ್ ಮಾಡೋ ಅವರನ್ನು ನಕ್ಸಲರು ಮಂಗಳವಾರ ರಾತ್ರಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಫರ್ಸೆಗಢ್ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮನ್‌ಪಲ್ಲಿ ಗ್ರಾಮದಲ್ಲಿರುವ ಮಾಡೋ ಅವರ ಮನೆಗೆ ನುಗ್ಗಿದ ನಕ್ಸಲೀಯರ ಗುಂಪು, ಅವರನ್ನು ಹೊರಗೆ ಎಳೆದುಕೊಂಡು ಹೋಗಿ ಕತ್ತು ಹಿಸುಕಿ ಕೊಂದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪ್ರಾತಿನಿಧಿಕ ಚಿತ್ರ
ಛತ್ತೀಸ್‌ಗಢ: ಸುಕ್ಮಾದಲ್ಲಿ ಐಇಡಿ ಸ್ಫೋಟ, ಪೊಲೀಸ್ ಕಾನ್ಸ್ ಟೇಬಲ್ ಗೆ ಗಾಯ

ಸ್ಥಳದಲ್ಲಿ ಸಿಕ್ಕ ಕರಪತ್ರದಲ್ಲಿ, ಮಾವೋವಾದಿಗಳ ರಾಷ್ಟ್ರೀಯ ಉದ್ಯಾನವನ ಸಮಿತಿಯು ಹತ್ಯೆಯ ಹೊಣೆಯನ್ನು ವಹಿಸಿಕೊಂಡಿದೆ ಮತ್ತು ಮಾಡೋ ಪೊಲೀಸ್ ಮಾಹಿತಿದಾರನಂತೆ ವರ್ತಿಸುತ್ತಿದ್ದರು ಎಂದು ಬರೆಯಲಾಗಿದೆ.

ಬುಧವಾರ ಬೆಳಗ್ಗೆ ಮಾಹಿತಿ ನೀಡಿದ ನಂತರ, ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com