ಮಹಾರಾಷ್ಟ್ರ: ಭಾನುವಾರ ಸಂಪುಟ ವಿಸ್ತರಣೆ, 15 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

ಮಹಾರಾಷ್ಟ್ರದ ಏರಡನೇ ರಾಜಧಾನಿಯಾಗಿರುವ ನಾಗಪುರದಲ್ಲಿ ಡಿಸೆಂಬರ್ 16 ರಿಂದ ವಾರದ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ
CM Devendra Fadnavis,shinde, Ajit Pawar
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ , ಡಿಸಿಎಂ ಏಕನಾಥ್ ಶಿಂಧೆ, ಅಜಿತ್ ಪವಾರ್
Updated on

ಮುಂಬೈ: ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆ ಡಿಸೆಂಬರ್ 15 ರಂದು ಭಾನುವಾರ ನಡೆಯಲಿದೆ. ನಾಗಪುರದ ಕಚೇರಿಯಲ್ಲಿ 15 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಶುಕ್ರವಾರ ತಿಳಿಸಿವೆ.

ಸುಮಾರು 30 ಸಚಿವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಮಹಾರಾಷ್ಟ್ರದ ಏರಡನೇ ರಾಜಧಾನಿಯಾಗಿರುವ ನಾಗಪುರದಲ್ಲಿ ಡಿಸೆಂಬರ್ 16 ರಿಂದ ವಾರದ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಡಿಸೆಂಬರ್ 5 ರಂದು ಮುಂಬೈಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದರು.

CM Devendra Fadnavis,shinde, Ajit Pawar
ಮಹಾರಾಷ್ಟ್ರ: ವಿಧಾನಸಭೆ ನೂತನ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆ

ಆದರೆ, ಮಹಾಯುತಿ ಮೈತ್ರಿ ಪಕ್ಷಗಳ ನಡುವಿನ ಅಧಿಕಾರ ಹಂಚಿಕೆಯಲ್ಲಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ವಿಳಂಬವಾಗಿದೆ. ಮತ್ತೊಂದೆಡೆ ಗೃಹ ಖಾತೆಗಾಗಿ ಏಕನಾಥ್ ಶಿಂಧೆ ಪಟ್ಟು ಹಿಡಿದಿದ್ದಾರೆ ಎಂಬಂತಹ ಮಾತುಗಳು ಕೇಳಿಬಂದಿದ್ದವು.

ಕೊನೆಗೂ ಅಧಿಕಾರ ಹಂಚಿಕೆಯನ್ನು ಬಿಜೆಪಿ, ಶಿವಸೇನಾ (ಶಿಂಧೆ ಬಣ) ಹಾಗೂ ಎನ್ ಸಿಪಿ ಪಕ್ಷಗಳು ಒಪ್ಪಿಕೊಂಡಿದ್ದು, ಭಾನುವಾರ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಸೇರಿದಂತೆ ಮಹಾರಾಷ್ಟ್ರ ಕ್ಯಾಬಿನೆಟ್ ನಲ್ಲಿ ಗರಿಷ್ಠ 43 ಸದಸ್ಯರನ್ನು ಹೊಂದಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com