ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ವಾಗ್ದಂಡನೆಗೆ ಆಗ್ರಹ: ರಾಜ್ಯಸಭೆ ವಿಪಕ್ಷಗಳಿಂದ ನೋಟಿಸ್

ಈ ನೋಟಿಸ್ ಗೆ ಕಪಿಲ್ ಸಿಬಲ್, ವಿವೇಕ್ ತಂಕಾ, ದಿಗ್ವಿಜಯ್ ಸಿಂಗ್, ಚಿದಂಬರಂ, ಜೈರಾಮ್ ರಮೇಶ್, ನಾಸೀರ್ ಹುಸೇನ್ ಸೇರಿದಂತೆ 55 ಸದಸ್ಯರು ಸಹಿ ಹಾಕಿದ್ದಾರೆ.
ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್
ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್
Updated on

ನವದೆಹಲಿ: ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ವಿವಾದಿತ ಹೇಳಿಕೆ ನೀಡಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರನ್ನು ವಾಗ್ದಂಡನೆಗೆ ಗುರಿಪಡಿಸಬೇಕು ಎಂದು ಕೋರಿ ಪ್ರತಿಪಕ್ಷಗಳು ರಾಜ್ಯಸಭೆಯಲ್ಲಿ ನೋಟಿಸ್ ನೀಡಿವೆ.

ಈ ನೋಟಿಸ್ ಗೆ ಕಪಿಲ್ ಸಿಬಲ್, ವಿವೇಕ್ ತಂಕಾ, ದಿಗ್ವಿಜಯ್ ಸಿಂಗ್, ಚಿದಂಬರಂ, ಜೈರಾಮ್ ರಮೇಶ್, ನಾಸೀರ್ ಹುಸೇನ್ ಸೇರಿದಂತೆ 55 ಸದಸ್ಯರು ಸಹಿ ಹಾಕಿದ್ದಾರೆ.

ಈ ಸದಸ್ಯರು ರಾಜ್ಯಸಭೆ ಪ್ರಧಾನ ಕಾರ್ಯದರ್ಶಿ ಅವರನ್ನು ಶುಕ್ರವಾರ ಭೇಟಿಯಾಗಿ ನೋಟಿಸ್ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನ್ಯಾಯಮೂರ್ತಿಗಳ ವಿಚಾರಣೆ ಕಾಯ್ದೆ 1968 ಮತ್ತು ಸಂವಿಧಾನದ ವಿಧಿ 218ರ ಅನ್ವಯ ನೋಟಿಸ್ ನೀಡಲಾಗಿದೆ.

ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್
"ನೀವು ತ್ರಿವಳಿ ತಲಾಖ್ ನೀಡುವಂತಿಲ್ಲ, ನಾಲ್ಕು ಪತ್ನಿ ಹೊಂದುವಂತಿಲ್ಲ" ಹೇಳಿಕೆ: Allahabad ಹೈಕೋರ್ಟ್ ಜಡ್ಜ್ ಪದಚ್ಯುತಿಗೆ 36 ಸಂಸದರ ಸಹಿ!

ಭಾನುವಾರ ಅಲಹಾಬಾದ್ ನಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್, ಭಾರತ ಹಿಂದೂ ಬಹುಸಂಖ್ಯಾತರ ಆಶಯದಂತೆ ನಡೆಯುತ್ತಿದೆ ಎಂದು ಹೇಳಿದ್ದರು. ಅಲ್ಲದೇ ಮುಸ್ಲಿಂ ಸಮುದಾಯದ ವಿರುದ್ಧ ಆಕ್ಷೇಪಾರ್ಹಕಾರಿ ಮಾತುಗಳನ್ನಾಡಿದ್ದರು. ನ್ಯಾಯಾಧೀಶರ ಭಾಷಣದ ಬಗ್ಗೆ ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com