ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲು

ಅಡ್ವಾಣಿಯವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಇಂದು ಬೆಳಿಗ್ಗೆ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಹಿರಿಯ ಬಿಜೆಪಿ ಮುಖಂಡ ಲಾಲ್ ಕೃಷ್ಣ ಅಡ್ವಾಣಿ
ಹಿರಿಯ ಬಿಜೆಪಿ ಮುಖಂಡ ಲಾಲ್ ಕೃಷ್ಣ ಅಡ್ವಾಣಿ
Updated on

ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಡ್ವಾಣಿಯವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಇಂದು ಬೆಳಿಗ್ಗೆ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಹಿಂದೆಯೂ ಅಡ್ವಾಣಿ ಅವರನ್ನು ಅಪೋಲೋ ಆಸ್ಪತ್ರೆ ದಾಖಲಾಸಲಾಗಿತ್ತು. ಆರೋಗ್ಯ ಸುಧಾರಿಸಿದ ಬಳಿಕ ಬಿಡುಗಡೆಗೊಂಡಿದ್ದರು. ಇದೀಗ ಮತ್ತೆ ಏರುಪೇರು ಕಂಡು ಬಂದಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಹಿರಿಯ ಬಿಜೆಪಿ ಮುಖಂಡ ಲಾಲ್ ಕೃಷ್ಣ ಅಡ್ವಾಣಿ
ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು!

ಇದು ಜುಲೈ ನಂತರ ಅವರ ನಾಲ್ಕನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದೆ. ಅವರು ಈ ಹಿಂದೆ ಅಪೋಲೋ ಆಸ್ಪತ್ರೆ ಮತ್ತು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಎರಡರಲ್ಲೂ ಚಿಕಿತ್ಸೆ ಪಡೆದಿದ್ದರು.

ಈ ನಡುವೆ ಬಿಜೆಪಿ ವಕ್ತಾರ ಕೆ ಕೃಷ್ಣ ಸಾಗರ್ ರಾವ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com