ಗಾಯಕ ಟಿಎಂ ಕೃಷ್ಣರನ್ನು ಸುಬ್ಬುಲಕ್ಷ್ಮಿ ಪ್ರಶಸ್ತಿ ಪುರಸ್ಕೃತರೆಂದು ಗುರುತಿಸಬಾರದು: ಸುಪ್ರೀಂ ಕೋರ್ಟ್

ಪ್ರಶಸ್ತಿಯನ್ನು ಈಗಾಗಲೇ ಕೃಷ್ಣ ಅವರಿಗೆ ಪ್ರದಾನ ಮಾಡಲಾಗಿದೆ. ಹೀಗಾಗಿ ಅವರನ್ನು ಎಂ.ಎಸ್. ಸುಬ್ಬುಲಕ್ಷ್ಮಿ ಪ್ರಶಸ್ತಿಗೆ ಭಾಜನರಾದವರು ಎಂದು ಗುರುತಿಸುವುದು ಬೇಡ.
Vocalist TM Krishna
ಗಾಯಕ ಟಿಎಂ ಕೃಷ್ಣ
Updated on

ನವದೆಹಲಿ: ಖ್ಯಾತ ಕರ್ನಾಟಕ ಸಂಗೀತ ಗಾಯಕ ಟಿ.ಎಂ ಕೃಷ್ಣ ಅವರನ್ನು ಎಂ.ಎಸ್. ಸುಬ್ಬುಲಕ್ಷ್ಮಿ ಪ್ರಶಸ್ತಿ ಪುರಸ್ಕೃತರು ಎಂದು ಗುರುತಿಸಬಾರದು ಸುಪ್ರೀಂ ಕೋರ್ಟ್ ಸೋಮವಾರ ತನ್ನ ಮಧ್ಯಂತರ ಆದೇಶದಲ್ಲಿ ಹೇಳಿದೆ.

ದಿವಂಗತ ಗಾಯಕಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಆರೋಪದ ಮೇರೆಗೆ ಅವರ ಹೆಸರಿನಲ್ಲಿ ಕೃಷ್ಣ ಅವರಿಗೆ ಪ್ರಶಸ್ತಿ ನೀಡಬಾರದು ಎಂದು ಅವರ ಮೊಮ್ಮಗ ವಿ.ಶ್ರೀನಿವಾಸನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್.ವಿ.ಎನ್. ಭಟ್ಟಿ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ.

ಎಲ್ಲಾ ಸಂಗೀತ ಅಭಿಮಾನಿಗಳು ಆರಾಧಿಸುವ ಎಂ.ಎಸ್. ಸುಬ್ಬುಲಕ್ಷ್ಮಿ ಅವರಿಗೆ ನ್ಯಾಯಾಲಯವು ಗೌರವ ಸಲ್ಲಿಸುತ್ತದೆ. ಅವರು ವಿಶಿಷ್ಟ ಗಾಯಕರು. ಅವರು ಡಿಸೆಂಬರ್ 2004ರಲ್ಲಿ ನಿಧನರಾದರೂ ಅವರ ಸುಮಧುರ ಕಂಠಸಿರಿಯನ್ನು ಕೇಳಿ ಅಭಿಮಾನಿಗಳು ಆನಂದಪಡುವುದನ್ನು ಮುಂದುವರೆಸಿದ್ದಾರೆ. ಪ್ರಶಸ್ತಿಯನ್ನು ಈಗಾಗಲೇ ಕೃಷ್ಣ ಅವರಿಗೆ ಪ್ರದಾನ ಮಾಡಲಾಗಿದೆ. ಹೀಗಾಗಿ ಅವರನ್ನು ಎಂ.ಎಸ್. ಸುಬ್ಬುಲಕ್ಷ್ಮಿ ಪ್ರಶಸ್ತಿಗೆ ಭಾಜನರಾದವರು ಎಂದು ಗುರುತಿಸುವುದು ಬೇಡ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

Vocalist TM Krishna
ರಾಷ್ಟ್ರೀಯ ಭಾವೈಕ್ಯತೆಗಾಗಿ ಟಿಎಂ ಕೃಷ್ಣ ಗೆ ಇಂದಿರಾ ಗಾಂಧಿ ಪ್ರಶಸ್ತಿ

ಗಾಯಕ ಕೃಷ್ಣ, ಮ್ಯೂಸಿಕ್ ಅಕಾಡೆಮಿ, ದಿ ಹಿಂದೂ ಮತ್ತು ಟಿಹೆಚ್ ಜಿ ಪಬ್ಲಿಕೇಷನ್ ಲಿಮೆಟೆಡ್ ಗೆ ನ್ಯಾಯಪೀಠ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com