ಸಿಎಂ ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ: ಉತ್ತರ ಪ್ರದೇಶ ವ್ಯಕ್ತಿಯ ಬಂಧನ

ಪೊಲೀಸರ ಪ್ರಕಾರ, ಅನಿಲ್ ಎಂಬ ವ್ಯಕ್ತಿ, 112 ಕ್ಕೆ ಡಯಲ್ ಮಾಡಿ, ಜನವರಿ 26 ರಂದು ಮುಖ್ಯಮಂತ್ರಿಯನ್ನು ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
Updated on

ಬರೇಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪೊಲೀಸ್ ಅಧಿಕಾರಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಅನಿಲ್ ಎಂಬ ವ್ಯಕ್ತಿ, ತುರ್ತು ಸೇವಾ ಸಂಖ್ಯೆ 112 ಕ್ಕೆ ಡಯಲ್ ಮಾಡಿ, ಜನವರಿ 26 ರಂದು ಮುಖ್ಯಮಂತ್ರಿಯನ್ನು ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಇಜ್ಜತ್‌ನಗರ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ಇತರ ಅಧಿಕಾರಿಗಳಿಗೂ ಬೆದರಿಕೆ ಹಾಕಿದ್ದಾನೆ ಎಂದು ಅವರು ಹೇಳಿದ್ದಾರೆ.

"ಮಂಗಳವಾರ ರಾತ್ರಿ ಬೆದರಿಕೆ ಬಂದ ನಂತರ, ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ ಆರೋಪಿಯ ಫೋನ್ ಸ್ವಿಚ್ ಆಫ್ ಆಗಿತ್ತು.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ: ಕಾರು-ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಸಾವು

ರಾತ್ರಿಯಿಡೀ ನಡೆಸಿದ ವ್ಯಾಪಕ ಕಾರ್ಯಾಚರಣೆಯ ನಂತರ, ಅನಿಲ್‌ನನ್ನು ಪತ್ತೆ ಮಾಡಿ ಬುಧವಾರ ಬಂಧಿಸಲಾಯಿತು” ಎಂದು ಇಜ್ಜತ್‌ನಗರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಧನಂಜಯ್ ಪಾಂಡೆ ತಿಳಿಸಿದ್ದಾರೆ.

ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ. ಗುರುವಾರದ ನಂತರ ಅನಿಲ್ ನನ್ನು ಇಲ್ಲಿನ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com