ವಕ್ಫ್ ಆಸ್ತಿ ವಿವಾದ: ರಾಜ್ಯ ಸರ್ಕಾರದ ಅಧಿಕಾರಿಗಳು ನಾಳೆ ಸಂಸದೀಯ ಸಮಿತಿ ಮುಂದೆ ಹಾಜರು

ಬಿಜೆಪಿ ಸದಸ್ಯ ಜಗದಾಂಬಿಕಾ ಪಾಲ್ ಅವರ ಅಧ್ಯಕ್ಷತೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಮಿತಿಯು ಗುರುವಾರದಿಂದ ಎರಡು ದಿನಗಳ ಕಾಲ ನಡೆಯುವ ಸಭೆ ನಡೆಸಲಿದೆ.
Joint Committee on Waqf Amendment Bill Chairman and BJP member Jagdambika Pal
ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಮಿತಿ ಅಧ್ಯಕ್ಷ ಮತ್ತು ಬಿಜೆಪಿ ಸದಸ್ಯ ಜಗದಾಂಬಿಕಾ ಪಾಲ್
Updated on

ನವದೆಹಲಿ: ಕರ್ನಾಟಕದಲ್ಲಿ ವಕ್ಫ್ ಆಸ್ತಿ ವಿವಾದದ ನಡುವೆ, ರಾಜ್ಯ ಸರ್ಕಾರದ ಅಧಿಕಾರಿಗಳು ಗುರುವಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಪರಿಶೀಲಿಸುವ ಸಂಸದೀಯ ಸಮಿತಿಯ ಮುಂದೆ ಹಾಜರಾಗಲು ನಿರ್ಧರಿಸಿದ್ದಾರೆ.

ಬಿಜೆಪಿ ಸದಸ್ಯ ಜಗದಾಂಬಿಕಾ ಪಾಲ್ ಅವರ ಅಧ್ಯಕ್ಷತೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಮಿತಿಯು ಗುರುವಾರದಿಂದ ಎರಡು ದಿನಗಳ ಕಾಲ ನಡೆಯುವ ಸಭೆಯಲ್ಲಿ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಒಡಿಶಾ ಮತ್ತು ದೆಹಲಿ ಸರ್ಕಾರಗಳ ಪ್ರತಿನಿಧಿಗಳಿಂದ ಅಭಿಪ್ರಾಯ ಸಂಗ್ರಹಿಸಲಿದೆ.

ದೆಹಲಿ ಆಹಾರ ಮತ್ತು ಸರಬರಾಜು ಸಚಿವ ಇಮ್ರಾನ್ ಹುಸೇನ್ ಅವರು ಶುಕ್ರವಾರ ಸಮಿತಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ದೆಹಲಿ ಸರ್ಕಾರದ ಪ್ರತಿನಿಧಿಗಳು ಸಾಕ್ಷ್ಯವನ್ನು ದಾಖಲಿಸಿದ್ದಾರೆ.

Joint Committee on Waqf Amendment Bill Chairman and BJP member Jagdambika Pal
ವಕ್ಫ್ ಆಸ್ತಿ ವಿವಾದ: JPC ಅಧ್ಯಕ್ಷರಿಗೆ ಯತ್ನಾಳ್ ಬಣದಿಂದ ವರದಿ ಸಲ್ಲಿಕೆ

ರಾಜ್ಯದಲ್ಲಿ ರೈತರ 1500 ಎಕರೆಗೂ ಹೆಚ್ಚು ಭೂಮಿಯನ್ನು ವಕ್ಫ್ ಬೋರ್ಡ್ ವಶಪಡಿಸಿಕೊಳ್ಳುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಅಧಿಕಾರಿಗಳಿಗೆ ಸಮಿತಿ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

ವಕ್ಫ್ ಆಸ್ತಿ ವಿವಾದದ ನಂತರ ಜಗದಾಂಬಿಕಾ ಪಾಲ್ ಅವರು ಕರ್ನಾಟಕಕ್ಕೆ ಭೇಟಿ ನೀಡಿದ್ದರು ಮತ್ತು ವಕ್ಫ್ ಮಂಡಳಿಗೆ ಸೇರಿದ ಆಸ್ತಿ ಸಂಬಂಧ ರಾಜ್ಯ ಸರ್ಕಾರದಿಂದ ನೋಟಿಸ್ ಪಡೆದಿದ್ದ ರೈತರೊಂದಿಗೆ ಸಂವಾದ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com