ನಾವು ಜನಪರ ಕೆಲಸ ಮಾಡಿದ್ದೇವೆ, ಮೂರನೇ ಬಾರಿ ಅಧಿಕಾರಕ್ಕೆ ಬರಲು ನಮ್ಮನ್ನು ಆಶೀರ್ವದಿಸಿ: ನಿರ್ಮಲಾ ಸೀತಾರಾಮನ್ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಧ್ಯಂತರ ಬಜೆಟ್ 2024 ನ್ನು ಮಂಡಿಸಿ ಕೇಂದ್ರ ಸರ್ಕಾರದ ಉತ್ತಮ ನೀತಿ-ನಿರೂಪಣೆ, ಯೋಜನೆಗಳು ಹಾಗೂ ಸರ್ಕಾರ ಮಾಡಿರುವ ಕೆಲಸಗಳು ಸತತ ಮೂರನೇ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಮರಳಲು ಸಹಾಯ ಮಾಡುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಧ್ಯಂತರ ಬಜೆಟ್ 2024 ನ್ನು ಮಂಡಿಸಿ ಕೇಂದ್ರ ಸರ್ಕಾರದ ಉತ್ತಮ ನೀತಿ-ನಿರೂಪಣೆ, ಯೋಜನೆಗಳು ಹಾಗೂ ಸರ್ಕಾರ ಮಾಡಿರುವ ಕೆಲಸಗಳು ಸತತ ಮೂರನೇ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಮರಳಲು ಸಹಾಯ ಮಾಡುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿ ಮಾತನಾಡಿದ ಅವರು, ನಮ್ಮ ಯುವಜನತೆಯನ್ನು ಒಳಗೊಂಡ ದೇಶವು ಹೆಚ್ಚಿನ ಆಕಾಂಕ್ಷೆಗಳನ್ನು ಹೊಂದಿದೆ, ಇಂದಿನ ವರ್ತಮಾನದ ಬಗ್ಗೆ ಹೆಮ್ಮೆ ಮತ್ತು ಉಜ್ವಲ ಭವಿಷ್ಯದ ಭರವಸೆ ಮತ್ತು ವಿಶ್ವಾಸವನ್ನು ಹೊಂದಿದೆ. ನಮ್ಮ ಸರ್ಕಾರದ ಉತ್ತಮ ಕೆಲಸ ಕಂಡು ವಿಶ್ವಾಸದಿಂದ ದೇಶದ ಜನರು ಮತ್ತೊಮ್ಮೆ ಆಶೀರ್ವದಿಸುವ ವಿಶ್ವಾಸದಲ್ಲಿ ನಾವಿದ್ದೇವೆ ಎಂದರು. 

ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರಿಗೆ ಬಹು ಆಯಾಮದ ಬಡತನದಿಂದ ಹೊರಬರಲು ಸರ್ಕಾರ ಸಹಾಯ ಮಾಡಿದೆ. ಎರಡನೇ ಅವಧಿಯಲ್ಲಿ, ನಮ್ಮ ಸರ್ಕಾರವು ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್ ಘೋಷವಾಕ್ಯದಂತೆ ನಡೆದಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com