ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸೀಟು ಪಡೆಯುವುದು ಅನುಮಾನ: ಮಮತಾ ಬ್ಯಾನರ್ಜಿ

ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷವನ್ನು ಎದುರಿಸುವಂತೆ ಮಿತ್ರ ಪಕ್ಷಕ್ಕೆ ಶುಕ್ರವಾರ ಸವಾಲು ಹಾಕಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Updated on

ಕೋಲ್ಕತಾ: ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷವನ್ನು ಎದುರಿಸುವಂತೆ ಮಿತ್ರ ಪಕ್ಷಕ್ಕೆ ಶುಕ್ರವಾರ ಸವಾಲು ಹಾಕಿದ್ದಾರೆ.

ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ "40 ಸ್ಥಾನಗಳನ್ನು" ಪಡೆಯುವುದು ಅನುಮಾನ ಎಂದು ಟಿಎಂಸಿ ಮುಖ್ಯಸ್ಥೆ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಆರು ಜಿಲ್ಲೆಗಳಲ್ಲಿ ಸಂಚರಿಸಿದ ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಟೀಕಿಸಿದ ಬ್ಯಾನರ್ಜಿ, ರಾಜ್ಯಕ್ಕೆ ಬಂದಿರುವ "ವಲಸೆ ಹಕ್ಕಿಗಳಿಗೆ" "ಕೇವಲ ಫೋಟೋಗೆ ಅವಕಾಶ" ನೀಡುತ್ತಿದೆ ಎಂದಿದ್ದಾರೆ.

"ಕಾಂಗ್ರೆಸ್ ದೇಶಾದ್ಯಂತ 300 ಸ್ಥಾನಗಳಲ್ಲಿ ಸ್ಪರ್ಧಿಸಬೇಕೆಂದು ನಾನು ಪ್ರಸ್ತಾಪಿಸಿದ್ದೇನೆ. ಆದರೆ ಅವರು ಆ ಬಗ್ಗೆ ಗಮನ ಹರಿಸುವ ಬದಲು ಈಗ ರಾಜ್ಯದಲ್ಲಿ ಮುಸ್ಲಿಂ ಮತದಾರರನ್ನು ಪ್ರಚೋದಿಸಲು ಬಂದಿದ್ದಾರೆ. ಅವರು ಅವರು 300 ಮಂದಿ ಸ್ಪರ್ಧಿಸಿದರೂ 40 ಸ್ಥಾನಗಳನ್ನು ಪಡೆಯುತ್ತಾರೆಯೇ ಎಂದು ನನಗೆ ಅನುಮಾನವಿದೆ" ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ಧರಣಿಯಲ್ಲಿ ಮಾತನಾಡಿದ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ನಮ್ಮ ಪಕ್ಷವು ಸಿದ್ಧವಾಗಿದೆ. ಆದರೆ ನಮ್ಮ ಪ್ರಸ್ತಾಪವನ್ನು ಅತ್ಯಂತ ಹಳೆಯ ಪಕ್ಷ ನಿರಾಕರಿಸಿದ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com