ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಅವರ ಪುತ್ರಿಯರಾದ ಮಿಸಾ ಭಾರತಿ ಮತ್ತು ಹೇಮಾ ಯಾದವ್ಗೆ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ರೋಸ್ ಅವೆನ್ಯೂ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ಚಾರ್ಜ್ ಶೀಟ್ನ ವಿಚಾರಣೆ ನಡೆಸಿದ ನ್ಯಾಯಾಲಯ ಅವರಿಗೆ ಸಮನ್ಸ್ ನೀಡಿತ್ತು. ಮುಂದಿನ ವಿಚಾರಣೆಯನ್ನು ಫೆಬ್ರವರಿ 28ಕ್ಕೆ ಮುಂದೂಡಲಾಗಿದೆ.
ಪಿಎಂಎಲ್ಎ ನ್ಯಾಯಾಲಯವು ಈ ಹಿಂದೆ ಅಮಿತ್ ಕಟ್ಯಾಲ್, ರಾಬ್ರಿ ದೇವಿ,(Rabri Devi) ಮಿಶಾ ಭಾರತಿ, ಹೇಮಾ ಯಾದವ್ ಮತ್ತು ಹೃದಯಾನಂದ್ ಚೌಧರಿ ವಿರುದ್ಧ ಇಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು.
ರಾಬ್ರಿ ದೇವಿ, ಮಿಸಾ ಭಾರತಿ, ಹೇಮಾ ಯಾದವ್ ನ್ಯಾಯಾಲಯದ ಮುಂದೆ ಇಂದು ವಿಚಾರಣೆಗೆ ಹಾಜರಾದರೆ, ಅಮಿತ್ ಕತ್ಯಾಲ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಿದ್ದರು.
ಜಾರಿ ನಿರ್ದೇಶನಾಲಯ ಕಳೆದ ಜನವರಿ 1ರಂದು ಅಮಿತ್ ಕತ್ಯಾಲ್, ರಾಬ್ರಿ ದೇವಿ, ಮಿಶಾ ಭಾರತಿ, ಹೇಮಾ ಯಾದವ್, ಹೃದಯಾನಂದ್ ಚೌಧರಿ ಮತ್ತು ಎರಡು ಕಂಪನಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ), 2002 ರ ನಿಬಂಧನೆಗಳ ಅಡಿಯಲ್ಲಿ ಪ್ರಾಸಿಕ್ಯೂಷನ್ ದೂರು (ಪಿಸಿ) ದಾಖಲಿಸಿತ್ತು. ಎ ಕೆ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎ ಬಿ ಎಕ್ಸ್ಪೋರ್ಟ್ಸ್ ಪ್ರೈ. ಲಿಮಿಟೆಡ್ ದೆಹಲಿಯ ವಿಶೇಷ ನ್ಯಾಯಾಲಯದ (PMLA) ಮುಂದೆ, ಆಪಾದಿತ ಹಗರಣದಲ್ಲಿ ವಿಚಾರಣೆಯನ್ನು ಎದುರಿಸಿವೆ.
Advertisement