ಕೇರಳದ ವಯನಾಡಿನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಕೇರಳದ ವಯನಾಡಿನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಚ್ಚಿನ್: ಕೇರಳದ ವಯನಾಡಿನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಯನಾಡಿನ ಮಾನಂತವಾಡಿ ಬಳಿ ಶನಿವಾರ ಬೆಳಗ್ಗೆ ಜನವಸತಿ ಪ್ರದೇಶಕ್ಕೆ ನುಗ್ಗಿದ ಕಾಡಾನೆ ದಾಳಿಗೆ 42 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ 7.30 ರ ಸುಮಾರಿಗೆ ನಡೆದ ದಾಳಿಯ ನಂತರ ಅಜಿ ಅವರು ಮಾನಂದವಾಡಿ ವೈದ್ಯಕೀಯ ಕಾಲೇಜಿನಲ್ಲಿ ಸಾವನ್ನಪ್ಪಿದ್ದಾರೆ. ಅಲ್ಲದೆ ವ್ಯಕ್ತಿ ಮೇಲೆ ದಾಳಿ ಮಾಡಿದ ಆನೆ ಬಳಿಕ ಮನೆಯೊಂದರ ಮೇಲೂ ದಾಳಿ ಮಾಡಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ಕಾರಣ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. 

ಏತನ್ಮಧ್ಯೆ, ಕೇರಳ ಅರಣ್ಯ ಸಚಿವ ಎಕೆ ಸಸೀಂದ್ರನ್ ಅವರು ಅಧಿಕಾರಿಗಳ ವಿರುದ್ಧ ಸ್ಥಳೀಯರಿಂದ ಪ್ರತಿಭಟನೆ ವರದಿಯಾದ ಬೆನ್ನಲ್ಲೇ ಘಟನೆಯ ಬಗ್ಗೆ ಚರ್ಚಿಸಲು ಉನ್ನತ ಮಟ್ಟದ ಸಭೆ ಕರೆದಿದ್ದಾರೆ ಎಂದು ತಿಳಿದುಬಂದಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com