ಶ್ರೀರಾಮನ ವಿಚಾರದಲ್ಲಿ ರಾಜಿ ಇಲ್ಲ..  ನನ್ನನ್ನು ಬಿಡುಗಡೆ ಮಾಡಿದ್ದಕ್ಕಾಗಿ ಧನ್ಯವಾದಗಳು: ಕಾಂಗ್ರೆಸ್ ಗೆ ಆಚಾರ್ಯ ಪ್ರಮೋದ್ ಕೃಷ್ಣಂ ಟಾಂಗ್

ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿರುವ ಕಾಂಗ್ರೆಸ್ ಕ್ರಮಕ್ಕೆ ಟಾಂಗ್ ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ 'ಬಿಡುಗಡೆ ಮಾಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.
ಆಚಾರ್ಯ ಪ್ರಮೋದ್ ಕೃಷ್ಣಂ
ಆಚಾರ್ಯ ಪ್ರಮೋದ್ ಕೃಷ್ಣಂ
Updated on

ಲಖನೌ: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿರುವ ಕಾಂಗ್ರೆಸ್ ಕ್ರಮಕ್ಕೆ ಟಾಂಗ್ ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ 'ಬಿಡುಗಡೆ ಮಾಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಿದ ಬೆನ್ನಲ್ಲೇ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಚಾರ್ಯ ಪ್ರಮೋದ್ ಕೃಷ್ಣಂ, 'ಪಕ್ಷ ವಿರೋಧಿ ಚಟುವಟಿಕೆಗಳಿಂದಾಗಿ ನನ್ನನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಕಾಂಗ್ರೆಸ್ ಪತ್ರ ಬರೆದಿದೆ ಎಂದು ನನಗೆ ನಿನ್ನೆ ತಿಳಿಯಿತು, ನನ್ನನ್ನು ಬಿಡುಗಡೆ ಮಾಡಿದ್ದಕ್ಕಾಗಿ ನಾನು ಕಾಂಗ್ರೆಸ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಯಾವ ಚಟುವಟಿಕೆಗಳು ಪಕ್ಷ ವಿರೋಧಿ ಎಂಬುದನ್ನು ತಿಳಿಸಬೇಕು? ಶ್ರೀರಾಮನ ಹೆಸರನ್ನು ತೆಗೆದುಕೊಳ್ಳುವುದು ಪಕ್ಷ ವಿರೋಧಿಯೇ? ಅಯೋಧ್ಯೆಗೆ ಹೋಗುವುದು ಪಕ್ಷ ವಿರೋಧಿಯೇ?..." ಎಂದು ಪ್ರಶ್ನಿಸಿದ್ದಾರೆ.

"ನಾನು ರಾಮಭಕ್ತನಾಗಿದ್ದರಿಂದ ರಾಮನನ್ನು 14 ವರ್ಷಗಳ ಕಾಲ 'ವನವಾಸ'ಕ್ಕೆ ಕಳುಹಿಸಲಾಗಿದೆ, ಕಾಂಗ್ರೆಸ್ ಪಕ್ಷವು 6 ವರ್ಷಗಳ ಬದಲಿಗೆ 14 ವರ್ಷಗಳ ಕಾಲ ನನ್ನನ್ನು ಹೊರಹಾಕಬೇಕೆಂದು ನಾನು ಬಯಸುತ್ತೇನೆ ಎಂದು ಉಚ್ಛಾಟಿತ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಹೇಳಿದ್ದಾರೆ.

ಅಲ್ಲದೆ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ "ಕಲಂ 370 ರದ್ದತಿಯನ್ನು ವಿರೋಧಿಸುವಂತಹ ಕಾಂಗ್ರೆಸ್ ಪಕ್ಷವು ನಾನು ಒಪ್ಪದ ಅನೇಕ ನಿರ್ಧಾರಗಳನ್ನು ತೆಗೆದುಕೊಂಡಿದೆ. ಕಾಂಗ್ರೆಸ್ ಇದನ್ನು ವಿರೋಧಿಸಬಾರದಿತ್ತು... ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಕ್ಕೆ ಹೋಲಿಸಿದ ಡಿಎಂಕೆ ನಾಯಕರನ್ನು ಕಾಂಗ್ರೆಸ್ ಬೆಂಬಲಿಸಬಾರದಿತ್ತು. ಶ್ರೀರಾಮ ಮತ್ತು ರಾಷ್ಟ್ರದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದರು.

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾಗುವ ಪಕ್ಷದ ನಿರ್ಧಾರ "ದುರದೃಷ್ಟಕರ". ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ, ಜೈರಾಮ್ ರಮೇಶ್ ಮತ್ತು ಇತರ ಖ್ಯಾತ ನಾಯಕರು ಅಯೋಧ್ಯೆಯಲ್ಲಿ ನಡೆಯುವ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಪಕ್ಷವು ಸಮಾರಂಭವನ್ನು ಧಾರ್ಮಿಕ ಕಾರ್ಯಕ್ರಮಕ್ಕಿಂತ ಹೆಚ್ಚಾಗಿ "ಆರ್‌ಎಸ್‌ಎಸ್/ಬಿಜೆಪಿ ಕಾರ್ಯಕ್ರಮ" ಎಂದು ಟೀಕಿಸಿದ್ದಾರೆ.

ಸಚಿನ್ ಪೈಲಟ್ ಅವರನ್ನು ಪಕ್ಷದಲ್ಲಿ ಸಾಕಷ್ಟು ಅಗೌರವಗೊಳಿಸಲಾಗಿದೆ. ಆದರೆ ಅವರು ಭಗವಾನ್ ಶಿವನಂತೆ ಅವರು ವಿಷವನ್ನು ಸೇವಿಸುತ್ತಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನೂ ಅಗೌರವಗೊಳಿಸಲಾಗುತ್ತಿದೆ... ರಾಹುಲ್ ಗಾಂಧಿ ಅವರ ಯಾತ್ರೆಯಲ್ಲಿ ಅವರು ಯಾಕೆ ಸೇರುತ್ತಿಲ್ಲ ಎಂದು ನೀವು ಅವರನ್ನೇ ಕೇಳಬೇಕು? ನಮ್ಮ ಅಧ್ಯಕ್ಷರು (ಮಲ್ಲಿಕಾರ್ಜುನ ಖರ್ಗೆ) ಕೇವಲ ರಬ್ಬರ್ ಸ್ಟಾಂಪ್ ಆಗಿರುವುದರಿಂದ ಅವರಿಗೆ ಅಗೌರವ ತೋರಲು ಯಾರು ಸೂಚನೆ ನೀಡುತ್ತಿದ್ದಾರೆ ಎಂಬುದು ಪ್ರಶ್ನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com