ಸಮೀರ್ ವಾಂಖೆಡೆ
ಸಮೀರ್ ವಾಂಖೆಡೆಪಿಟಿಐ

ಫೆ.20ರವರೆಗೆ ಸಮೀರ್ ವಾಂಖೆಡೆ ಬಂಧನವಿಲ್ಲ: ಹೈಕೋರ್ಟ್‌ಗೆ ಇಡಿ ಹೇಳಿಕೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾದಕವಸ್ತು ನಿಯಂತ್ರಣ ದಳದ ಮುಂಬೈ ವಲಯದ ಮಾಜಿ ನಿರ್ದೇಶಕ ಸಮೀರ್ ವಾಂಖೆಡೆ ಅವರನ್ನು ಫೆಬ್ರವರಿ 20 ರವರೆಗೆ ಬಂಧಿಸುವುದಿಲ್ಲ ಎಂದು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ.
Published on

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾದಕವಸ್ತು ನಿಯಂತ್ರಣ ದಳದ ಮುಂಬೈ ವಲಯದ ಮಾಜಿ ನಿರ್ದೇಶಕ ಸಮೀರ್ ವಾಂಖೆಡೆ ಅವರನ್ನು ಫೆಬ್ರವರಿ 20 ರವರೆಗೆ ಬಂಧಿಸುವುದಿಲ್ಲ ಎಂದು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ. ಇಡಿ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ ಮತ್ತು ಮಧ್ಯಂತರ ಆದೇಶದ ಮೂಲಕ ತನಿಖೆಗೆ ತಡೆ ನೀಡುವಂತೆ ಕೋರಿ ವಾಂಖೆಡೆ ಕಳೆದ ವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಸಮೀರ್ ವಾಂಖೆಡೆ
'ದೇಶಭಕ್ತ ಎಂಬ ಕಾರಣಕ್ಕೆ ಶಿಕ್ಷೆಯಾಗುತ್ತಿದೆ', ಆರ್ಯನ್ ಖಾನ್ ಪ್ರಕರಣದಲ್ಲಿ ನಾನು 'ನಿರಪರಾಧಿ': ಸಮೀರ್ ವಾಂಖೆಡೆ

ಗುರುವಾರ ಮತ್ತು ಶುಕ್ರವಾರದ ಸಮಯದ ಕೊರತೆಯಿಂದಾಗಿ ಮತ್ತು ಸೋಮವಾರ (ಫೆಬ್ರವರಿ 19) ನ್ಯಾಯಾಲಯಗಳು ಕಾರ್ಯನಿರ್ವಹಿಸದ ಕಾರಣ ಮಂಗಳವಾರ (ಫೆಬ್ರವರಿ 20) ರವರೆಗೆ ಅರ್ಜಿಯನ್ನು ಆಲಿಸಲು ಸಾಧ್ಯವಾಗುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಪಿ ಡಿ ನಾಯ್ಕ್ ಮತ್ತು ಎನ್‌ಆರ್ ಬೋರ್ಕರ್ ಅವರ ವಿಭಾಗೀಯ ಪೀಠ ಹೇಳಿದೆ.

ಈ ವಿಷಯವನ್ನು ಸುದೀರ್ಘವಾಗಿ ಆಲಿಸಬೇಕಾಗಿದೆ. ಅಲ್ಲಿಯವರೆಗೆ ವಾಂಖೆಡೆಯನ್ನು ಬಂಧಿಸಲು ಸಂಸ್ಥೆ ಉದ್ದೇಶಿಸಿದೆಯೇ ಎಂದು ತಿಳಿಸಲು ಇಡಿ ಪರವಾಗಿ ಹಾಜರಾದ ವಕೀಲ ಸಂದೇಶ್ ಪಾಟೀಲ್ ಅವರನ್ನು ನ್ಯಾಯಪೀಠ ಕೇಳಿತು.

ಸಂಬಂಧಪಟ್ಟ ಅಧಿಕಾರಿಗಳಿಂದ ಸೂಚನೆಗಳನ್ನು ಕೇಳಿದ ನಂತರ ಪಾಟೀಲ್, ಫೆಬ್ರವರಿ 20 ರವರೆಗೆ ವಾಂಖೆಡೆಯನ್ನು ಬಂಧಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಪೀಠವು ಹೇಳಿಕೆಯನ್ನು ಅಂಗೀಕರಿಸಿತು ಮತ್ತು ಫೆಬ್ರವರಿ 20ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com