ಈಶಾನ್ಯ ದೆಹಲಿ ಹಿಂಸಾಚಾರ: ಮೂರು ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಈಶಾನ್ಯ ದೆಹಲಿ ಹಿಂಸಾಚಾರ: ಮೂರು ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ
ಈಶಾನ್ಯ ದೆಹಲಿ ಹಿಂಸಾಚಾರ: ಮೂರು ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ನವದೆಹಲಿ: ಈಶಾನ್ಯ ದೆಹಲಿ ಗಲಭೆ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ದೆಹಲಿ ನ್ಯಾಯಾಲಯ 2020ರಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ಐವರಲ್ಲಿ ನಾಲ್ವರನ್ನು ಕೊಲೆ-ಗಲಭೆ ಆರೋಪಗಳಿಂದ ಖುಲಾಸೆಗೊಳಿಸಿದೆ.

ಈ ಪ್ರಕರಣಗಳು ಈಶಾನ್ಯ ದೆಹಲಿಯ ದಯಾಳ್ ಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶಕ್ಕೆ ಸಂಬಂಧಿಸಿವೆ. 2020 ರ ಫೆಬ್ರವರಿಯಲ್ಲಿ ನಡೆದ ಗಲಭೆಯ ಸಮಯದಲ್ಲಿ ಮೂವರ ಕೊಲೆ ಸಂಬಂಧ ಈ ಪ್ರಕರಣಗಳನ್ನು 2020ರಲ್ಲಿ ದಾಖಲಿಸಲಾಗಿದೆ.

ಈಶಾನ್ಯ ದೆಹಲಿ ಹಿಂಸಾಚಾರ: ಮೂರು ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ
ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್, ಖಾಲಿದ್ ಸೈಫಿ ಖುಲಾಸೆ

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್ ಜೆ) ಪುಲಸ್ತ್ಯ ಪ್ರಮಾಚಲ 5 ಆರೋಪಿಗಳಲ್ಲಿ ಅಶೋಕ್ ಕುಮಾರ್, ಅಜಯ್ ಅಲಿಯಾಸ್ ಮೋನು, ಶುಭಂ ಮತ್ತು ಜಿತೇಂದರ್ ಕುಮಾರ್ ಅವರನ್ನು ಕೊಲೆ-ಗಲಭೆ ಆರೋಪಗಳಿಂದ ಖುಲಾಸೆಗೊಳಿಸಿದ್ದಾರೆ.

5ನೇ ವ್ಯಕ್ತಿಯಾದ ಆರಿಫ್ ಅಲಿಯಾಸ್ ಮೋಟಾ ವಿರುದ್ಧ ಕೊಲೆ ಅಪರಾಧದ ಆರೋಪ ಹೊರಿಸಲಾಗಿಲ್ಲ. ಗಲಭೆಗೆ ಸಂಬಂಧಿಸಿದ ಇತರ ಅಪರಾಧಗಳಿಂದ ಆತನನ್ನು ಖುಲಾಸೆಗೊಳಿಸಲಾಗಿದೆ. ಮೆಹತಾಬ್, ಜಾಕೀರ್ ಮತ್ತು ಅಶ್ಫಾಕ್ ಹುಸೇನ್ ಅವರ ಹತ್ಯೆಗಳಿಗೆ ಸಂಬಂಧಿಸಿದಂತೆ ಈ ಪ್ರಕರಣಗಳು ದಾಖಲಾಗಿವೆ.

ಈಶಾನ್ಯ ದೆಹಲಿ ಹಿಂಸಾಚಾರ: ಮೂರು ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ
ದೆಹಲಿ ಚಲೋ ಪ್ರತಿಭಟನೆ: ಕ್ರೀಡಾಂಗಣ ಜೈಲಾಗಿ ಪರಿವರ್ತಿಸಲ್ಲ ಎಂದ ದೆಹಲಿ ಸರ್ಕಾರ; ರೈತರ ಮೇಲೆ ಆಶ್ರುವಾಯು ಪ್ರಯೋಗ, ಹಲವರು ವಶಕ್ಕೆ

ಆರೋಪಿಗಳನ್ನು ಖುಲಾಸೆಗೊಳಿಸುವಾಗ, ಯಾವುದೇ ಆರೋಪಿಗಳು ನಿರ್ದಿಷ್ಟ ಸ್ಥಳ ಮತ್ತು ಸಮಯದಲ್ಲಿ ಗಲಭೆಕೋರರ ಭಾಗವಾಗಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದ್ದರಿಂದ, ಈ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ಅವರ ವಿರುದ್ಧದ ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com