ದೆಹಲಿಯಲ್ಲಿ ಕಮಲ್ ನಾಥ್, ಬಿಜೆಪಿ ಸೇರ್ತಾರಾ?

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳ ನಡುವೆ ಅವರು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿಗೆ ಆಗಮಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಕಮಲ್ ನಾಥ್
ಕಮಲ್ ನಾಥ್PTI
Updated on

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳ ನಡುವೆ ಅವರು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿಗೆ ಆಗಮಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ, ತಮ್ಮ ಭದ್ರಕೋಟೆಯಾದ ಛಿಂದ್ವಾರದ ಪ್ರವಾಸದಲ್ಲಿದ್ದ ಕಮಲ್ ನಾಥ್, ಅಲ್ಲಿಂದ ನೇರವಾಗಿ ದೆಹಲಿಗೆ ತೆರಳಿದ್ದಾರೆ. ಅವರು ಛಿಂದ್ವಾರದಿಂದ ಒಂಬತ್ತು ಬಾರಿ ಗೆದ್ದು ಸಂಸದರಾಗಿದ್ದರು.

ಕಮಲ್ ನಾಥ್
ಟ್ವಿಟ್ಟರ್ ಪ್ರೊಫೈಲ್‌ನಲ್ಲಿ ಕಾಂಗ್ರೆಸ್ ತೆಗೆದು ಹಾಕಿದ ಕಮಲ್ ನಾಥ್ ಪುತ್ರ ನಕುಲ್ ನಾಥ್!

2019 ರ ಲೋಕಸಭಾ ಚುನಾವಣೆಯಲ್ಲಿ ಅವರ ಮಗ ನಕುಲ್ ನಾಥ್ ಆ ಸ್ಥಾನವನ್ನು ಗೆದಿದ್ದರು. ಉಳಿದ 28 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿತು. ಕಮಲ್ ನಾಥ್ ಬಿಜೆಪಿ ಸೇರಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ನಿನ್ನೆ ರಾತ್ರಿ 10.30 ಕ್ಕೆ ಕಮಲ್ ನಾಥ್ ಅವರೊಂದಿಗೆ ಮಾತನಾಡಿದ್ದೇನೆ, ಅವರು ಛಿಂದ್ವಾರಾದಲ್ಲಿದ್ದಾರೆ" ಎಂದು ಹೇಳಿದರು.

"ಜನತಾ ಪಕ್ಷದಿಂದ ಇಂದಿರಾ ಗಾಂಧಿಯನ್ನು ಜೈಲಿಗೆ ಕಳುಹಿಸಿದಾಗ ನೆಹರೂ-ಗಾಂಧಿ ಕುಟುಂಬದೊಂದಿಗೆ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದ ವ್ಯಕ್ತಿ, ಅಂತಹ ವ್ಯಕ್ತಿ ಎಂದಿಗೂ ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬವನ್ನು ತೊರೆಯುತ್ತಾರೆ ಎಂದು ನೀವು ಭಾವಿಸುತ್ತೀರಾ?" ಸಿಂಗ್ ಪ್ರಶ್ನಿಸಿದರು.

ರಾಜ್ಯಸಭಾ ಸ್ಥಾನ ಸಿಗದಿರುವ ಬಗ್ಗೆ ಕಮಲ್ ನಾಥ್ ಅಸಮಾಧಾನಗೊಂಡಿದ್ದಾರೆ ಮತ್ತು ಕಳೆದ ವರ್ಷ ತಡವಾಗಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸೋತ ನಂತರ ರಾಹುಲ್ ಗಾಂಧಿ ಅವರನ್ನು ವಿರೋಧಿಸುತ್ತಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com