ವಿಳಂಬ ಧೋರಣೆ ಬಿಡಿ, ರೈತರ ಬೇಡಿಕೆಗಳನ್ನು ಒಪ್ಪಿಕೊಳ್ಳಿ: ಸರ್ಕಾರಕ್ಕೆ ರೈತನಾಯಕ ದಲ್ಲೇವಾಲ್

ಕೇಂದ್ರ ಸರ್ಕಾರ ವಿಳಂಬ ಧೋರಣೆಯನ್ನು ಅನುಸರಿಸುವುದನ್ನು ಬಿಡಬೇಕು ಹಾಗೂ ರೈತರ ಬೇಡಿಕೆಗಳನ್ನು 2024 ರ ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗುವುದಕ್ಕೂ ಮುನ್ನ ಈಡೇರಿಸಬೇಕು ಎಂಉ ರೈತ ನಾಯಕ ಜಗ್ಜೀತ್ ಸಿಂಗ್ ದಲ್ಲೇವಾಲ್ ಕೇಂದ್ರ ಸಚಿವರೊಂದಿಗಿನ ಸಭೆಗೂ ಮುನ್ನ ಹೇಳಿದ್ದಾರೆ.
ವಿಳಂಬ ಧೋರಣೆ ಬಿಡಿ, ರೈತರ ಬೇಡಿಕೆಗಳನ್ನು ಒಪ್ಪಿಕೊಳ್ಳಿ: ಸರ್ಕಾರಕ್ಕೆ ರೈತನಾಯಕ ದಲ್ಲೇವಾಲ್

ನವದೆಹಲಿ: ಕೇಂದ್ರ ಸರ್ಕಾರ ವಿಳಂಬ ಧೋರಣೆಯನ್ನು ಅನುಸರಿಸುವುದನ್ನು ಬಿಡಬೇಕು ಹಾಗೂ ರೈತರ ಬೇಡಿಕೆಗಳನ್ನು 2024 ರ ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗುವುದಕ್ಕೂ ಮುನ್ನ ಈಡೇರಿಸಬೇಕು ಎಂಉ ರೈತ ನಾಯಕ ಜಗ್ಜೀತ್ ಸಿಂಗ್ ದಲ್ಲೇವಾಲ್ ಕೇಂದ್ರ ಸಚಿವರೊಂದಿಗಿನ ಸಭೆಗೂ ಮುನ್ನ ಹೇಳಿದ್ದಾರೆ.

ವಿಳಂಬ ಧೋರಣೆ ಬಿಡಿ, ರೈತರ ಬೇಡಿಕೆಗಳನ್ನು ಒಪ್ಪಿಕೊಳ್ಳಿ: ಸರ್ಕಾರಕ್ಕೆ ರೈತನಾಯಕ ದಲ್ಲೇವಾಲ್
ಸರ್ಕಾರದ ಪತ್ರದಲ್ಲಿ ಹೊಸತೇನೂ ಇಲ್ಲ, ನಾವು ಮಾತುಕತೆಗೆ ಸಿದ್ಧ, ಕೇಂದ್ರ ನಿರ್ದಿಷ್ಟ ಪರಿಹಾರ ನೀಡಬೇಕು: ರೈತ ಮುಖಂಡರು

ಮುಂದಿನ ತಿಂಗಳು ಲೋಕಸಭಾ ಚುನಾವಣೆಗೆ ದಿನಾಂಕಗಳು ಘೋಷಣೆಯಾಗುವ ಸಾಧ್ಯತೆ ಇದೆ. ಕೇಂದ್ರ ಸಚಿವರು ಹಾಗೂ ರೈತ ಮುಖಂಡರೊಂದಿಗಿನ ಸಭೆ ಆರಂಭವಾಗಿದೆ. ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ, ಸಾಲ ಮನ್ನಾ ಸೇರಿದಂತೆ ಹಲವು ಬೇಡಿಕೆಗಳನ್ನು ರೈತ ಮುಖಂಡರು ಕೇಂದ್ರ ಸರ್ಕಾರದ ಮುಂದಿಟ್ಟಿದ್ದಾರೆ.

ವಿಳಂಬ ಧೋರಣೆ ಬಿಡಿ, ರೈತರ ಬೇಡಿಕೆಗಳನ್ನು ಒಪ್ಪಿಕೊಳ್ಳಿ: ಸರ್ಕಾರಕ್ಕೆ ರೈತನಾಯಕ ದಲ್ಲೇವಾಲ್
3 ನೇ ದಿನಕ್ಕೆ ಕಾಲಿಟ್ಟ ರೈತರ ದೆಹಲಿ ಚಲೋ ಪ್ರತಿಭಟನೆ

ಪಂಜಾಬ್-ಹರ್ಯಾಣಗಳ ಗಡಿ ಪಾಯಿಂಟ್ ಗಳಾದ ಶಂಭು ಹಾಗೂ ಖನೌರಿ ಗಳಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರೊಂದಿಗೆ ಈ ಸಭೆ ನಡೆಯುತ್ತಿದೆ. ಈ ಹಿಂದೆ ಫೆಬ್ರವರಿ 8, 12 ಮತ್ತು 15 ರಂದು ಸಚಿವರು ಮತ್ತು ರೈತ ಮುಖಂಡರು ಭೇಟಿಯಾಗಿದ್ದರು ಆದರೆ ಮಾತುಕತೆಗಳು ನಿರ್ಣಾಯಕ ಘಟ್ಟ ತಲುಪಿರಲಿಲ್ಲ.

ನೀತಿ ಸಂಹಿತೆ ಜಾರಿಯಾಗುವವರೆಗೆ ಸಭೆ ನಡೆಸಿ, ನಂತರ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರೆ ರೈತರು ಹಿಂತಿರುಗುತ್ತಾರೆ ಎಂದು ಸರ್ಕಾರ ಭಾವಿಸಿದ್ದರೆ ರೈತರು ಹಿಂತಿರುಗುವುದಿಲ್ಲ ಎಂದು ದಲ್ಲೇವಾಲ್ ಎಚ್ಚರಿಕೆ ನೀಡಿದ್ದಾರೆ. ನೀತಿ ಸಂಹಿತೆ ಜಾರಿಯಾಗುವ ಮುನ್ನ ಸರಕಾರ ನಮ್ಮ ಬೇಡಿಕೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ದಲ್ಲೆವಾಲ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com