ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ, ಬಿಗಿ ಭದ್ರತೆ!

ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಜಮ್ಮುವಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಪೊಲೀಸರು ಮತ್ತು ಅರೆಸೇನಾ ಪಡೆಗಳು ನಗರ ಮತ್ತಿತರ ಕಡೆಗಳಲ್ಲಿ ವಾಹನಗಳ ತಪಾಸಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.
ಭದ್ರತಾ ಪಡೆಗಳು
ಭದ್ರತಾ ಪಡೆಗಳುPTI

ಕಾಶ್ಮೀರ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಜಮ್ಮುವಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಪೊಲೀಸರು ಮತ್ತು ಅರೆಸೇನಾ ಪಡೆಗಳು ನಗರ ಮತ್ತಿತರ ಕಡೆಗಳಲ್ಲಿ ವಾಹನಗಳ ತಪಾಸಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.

ಮುನ್ನೆಚ್ಚರಿಕೆ ಕ್ರಮವಾಗಿ ಶ್ರೀನಗರದ ವಿವಿಧ ಸ್ಥಳಗಳ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ವಿಶೇಷ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಪ್ರಧಾನಿ ಜಮ್ಮುವಿಗೆ ಭೇಟಿ ನೀಡುತ್ತಿದ್ದರೂ, ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದಕರು ಯಾವುದೇ ವಿಧ್ವಂಸಕ ಚಟುವಟಿಕೆಗಳನ್ನು ನಡೆಸದಂತೆ ನೋಡಿಕೊಳ್ಳಲು ಕಣಿವೆಯಲ್ಲಿ ಭದ್ರತಾ ಏಜೆನ್ಸಿಗಳನ್ನು ಅಲರ್ಟ್ ಮಾಡಲಾಗಿದೆ ಎಂದು ಅವರು ಹೇಳಿದರು.

ತಮ್ಮ ಎರಡನೇ ಅಧಿಕಾರಾವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಮೋದಿಯವರ ಎರಡನೇ ಭೇಟಿ ಇದಾಗಿದೆ. ಜಮ್ಮುವಿನ ಏಮ್ಸ್ ಆಸ್ಪತ್ರೆ, ಚೆನಾಬ್ ನದಿಯ ಮೇಲಿನ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಮತ್ತು ಉಧಮ್‌ಪುರದ ದೇವಿಕಾ ನದಿ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ ನಿರೀಕ್ಷೆಯಿದೆ.

ಮೋದಿ ಅವರು ಸಂಗಲ್ದನ್-ಬಾರಾಮುಲ್ಲಾ ಸಂಪರ್ಕಿಸುವ ಮೊದಲ ರೈಲನ್ನು ಉದ್ಘಾಟಿಸುವ ಸಾಧ್ಯತೆಯಿದೆ. ನಂತರ ಜಮ್ಮುವಿನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com