ಕೇಂದ್ರದ ಪ್ರಸ್ತಾವ ತಿರಸ್ಕರಿಸಿದ ರೈತ ಮುಖಂಡರು, ಫೆ.21ರಂದು ದಿಲ್ಲಿಯತ್ತ ಪಾದಯಾತ್ರೆ

ಬೇಳೆಕಾಳುಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಸರಕಾರಿ ಸಂಸ್ಥೆಗಳು ಐದು ವರ್ಷಗಳ ಅವಧಿಗೆ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವ ಕೇಂದ್ರದ ಪ್ರಸ್ತಾಪವನ್ನು 'ದಿಲ್ಲಿ ಚಲೋ' ಆಂದೋಲನದಲ್ಲಿ ಭಾಗವಹಿಸಿರುವ ರೈತ ಮುಖಂಡರು ಸೋಮವಾರ ತಿರಸ್ಕರಿಸಿದ್ದಾರೆ.
ರೈತರ ಪ್ರತಿಭಟನೆ
ರೈತರ ಪ್ರತಿಭಟನೆPTI

ನವದೆಹಲಿ: ಬೇಳೆಕಾಳುಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಸರಕಾರಿ ಸಂಸ್ಥೆಗಳು ಐದು ವರ್ಷಗಳ ಅವಧಿಗೆ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವ ಕೇಂದ್ರದ ಪ್ರಸ್ತಾಪವನ್ನು 'ದಿಲ್ಲಿ ಚಲೋ' ಆಂದೋಲನದಲ್ಲಿ ಭಾಗವಹಿಸಿರುವ ರೈತ ಮುಖಂಡರು ಸೋಮವಾರ ತಿರಸ್ಕರಿಸಿದ್ದಾರೆ.

ರೈತರ ಪ್ರತಿಭಟನೆ
ರೈತರ ಪ್ರತಿಭಟನೆ: ಪಂಜಾಬ್‌ನಲ್ಲಿ ಫೆ.24ರವರೆಗೆ ಇಂಟರ್‌ನೆಟ್ ಸೇವೆ ಸ್ಥಗಿತ!

"ನಮ್ಮ ಸಮಸ್ಯೆಗಳನ್ನು ಪರಿಹರಿಸಿ ಅಥವಾ ಬ್ಯಾರಿಕೇಡ್ಗಳನ್ನು ತೆಗೆದುಹಾಕಿ ಶಾಂತಿಯುತವಾಗಿ ಪ್ರತಿಭಟಿಸಲು ದೆಹಲಿಗೆ ಹೋಗಲು ಅವಕಾಶ ನೀಡುವಂತೆ ನಾವು ಸರ್ಕಾರಕ್ಕೆ ಮನವಿ ಮಾಡುತ್ತೇವೆ" ಎಂದು ರೈತ ಮುಖಂಡ ಸರ್ವನ್ ಸಿಂಗ್ ಪಂಧೇರ್ ಹೇಳಿದರು.

ರೈತ ಮುಖಂಡರೊಂದಿಗಿನ ನಾಲ್ಕನೇ ಸುತ್ತಿನ ಮಾತುಕತೆಯಲ್ಲಿ, ಮೂವರು ಕೇಂದ್ರ ಸಚಿವರ ಸಮಿತಿಯು ರೈತರೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಐದು ವರ್ಷಗಳವರೆಗೆ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್ಪಿ) ಸರ್ಕಾರಿ ಸಂಸ್ಥೆಗಳಿಂದ ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳನ್ನು ಖರೀದಿಸಲು ಪ್ರಸ್ತಾಪಿಸಿದೆ. ರೈತ ಮುಖಂಡರೊಂದಿಗಿನ ನಾಲ್ಕನೇ ಸುತ್ತಿನ ಮಾತುಕತೆಯಲ್ಲಿ, ಮೂವರು ಕೇಂದ್ರ ಸಚಿವರ ಸಮಿತಿ ರೈತರೊಂದಿಗೆ ಒಪ್ಪಂದ ಮಾಡಿಕೊಂಡು, 5 ವರ್ಷಗಳವರೆಗೆ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್ಪಿ) ಸರ್ಕಾರಿ ಸಂಸ್ಥೆಗಳಿಂದ ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳನ್ನು ಖರೀದಿಸಲು ಪ್ರಸ್ತಾಪಿಸಿದೆ.

ರೈತರ ಪ್ರತಿಭಟನೆ
ಫೆಬ್ರವರಿ 21ರವರೆಗೆ ದೆಹಲಿ ಚಲೋಗೆ ಬ್ರೇಕ್: ಕೇಂದ್ರದ ಎಂಎಸ್‌ಪಿ ಪ್ರಸ್ತಾವನೆ ಕುರಿತು ರೈತರಿಂದ ಚರ್ಚೆ

ಇದಕ್ಕೂ ಮುನ್ನ ಸೋಮವಾರ, 2020-21 ರ ಆಂದೋಲನದ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿತ್ತು. ಇದು ರೈತರ ಬೇಡಿಕೆಯನ್ನು "ಬೇರೆಡೆಗೆ ತಿರುಗಿಸಲು ಮತ್ತು ದುರ್ಬಲಗೊಳಿಸಲು" ಮುಂದಿಡುತ್ತಿರುವ ಪ್ರಸ್ತಾವವಾಗಿದೆ ಮತ್ತು ಸ್ವಾಮಿನಾಥನ್ ಆಯೋಗದ ವರದಿಯಲ್ಲಿ ಶಿಫಾರಸು ಮಾಡಿದಂತೆ ಎಂಎಸ್ಪಿಗಾಗಿ 'ಸಿ -2 ಪ್ಲಸ್ 50 ಶೇಕಡಾ' ಸೂತ್ರಕ್ಕಿಂತ ಕಡಿಮೆ ಇರುವ ಏನನ್ನೂ ರೈತ ಮುಖಂಡರು ಒಪ್ಪುವುದಿಲ್ಲ ಎಂದು ಅವರು ಹೇಳಿದರು.

ನಂತರ, 'ದೆಹಲಿ ಚಲೋ' ಮೆರವಣಿಗೆಯ ನೇತೃತ್ವ ವಹಿಸಿರುವ ಎಸ್ಕೆಎಂ (ರಾಜಕೀಯೇತರ) ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್, "ಕೇಂದ್ರದ ಪ್ರಸ್ತಾವನೆಯ ಬಗ್ಗೆ ನಮ್ಮ ಎರಡು ವೇದಿಕೆಗಳಲ್ಲಿ ಚರ್ಚೆ ನಡೆಸಲಾಗಿದೆ. ಆದರೆ ಕೇಂದ್ರದ ಪ್ರಸ್ತಾಪವು ರೈತರ ಹಿತದೃಷ್ಟಿಯಿಂದ ಇಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಆದ್ದರಿಂದ ನಾವು ಈ ಪ್ರಸ್ತಾಪವನ್ನು ತಿರಸ್ಕರಿಸುತ್ತೇವೆ" ಎಂದು ಹೇಳಿದರು.

ರೈತರ ಪ್ರತಿಭಟನೆ
ದೆಹಲಿ ಚಲೋ ಪ್ರತಿಭಟನೆ: ಕ್ರೀಡಾಂಗಣ ಜೈಲಾಗಿ ಪರಿವರ್ತಿಸಲ್ಲ ಎಂದ ದೆಹಲಿ ಸರ್ಕಾರ; ರೈತರ ಮೇಲೆ ಆಶ್ರುವಾಯು ಪ್ರಯೋಗ, ಹಲವರು ವಶಕ್ಕೆ

ದೆಹಲಿಗೆ ಮೆರವಣಿಗೆ ನಡೆಸುವುದರ ಬಗ್ಗೆ ನಿರ್ಧಾರದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ರೈತ ಮುಖಂಡ ಸರ್ವನ್ ಸಿಂಗ್ ಪಂಧೇರ್, "ನಾವು ಫೆಬ್ರವರಿ 21 ರಂದು ಬೆಳಿಗ್ಗೆ 11 ಗಂಟೆಗೆ ಶಾಂತಿಯುತವಾಗಿ ದೆಹಲಿಗೆ ತೆರಳುತ್ತೇವೆ" ಎಂದು ಹೇಳಿದರು. ಭಾನುವಾರ ರಾತ್ರಿ ರೈತ ಮುಖಂಡರೊಂದಿಗಿನ ಮಾತುಕತೆಯ ನಂತರ ಮಾತನಾಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್, "ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಮತ್ತು ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಂತಹ ಸಹಕಾರಿ ಸಂಘಗಳು ಮುಂದಿನ 5 ವರ್ಷಗಳವರೆಗೆ ಬೆಳೆಯನ್ನು ಎಂಎಸ್ಪಿ ದರದಲ್ಲಿ ಖರೀದಿಸಲು 'ತೊಗರಿ ಬೇಳೆ', 'ಉದ್ದಿನ ಬೇಳೆ', 'ಮಸೂರ್ ದಾಲ್' ಅಥವಾ ಮೆಕ್ಕೆಜೋಳವನ್ನು ಬೆಳೆಯುವ ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತವೆ, "ಖರೀದಿಸಿದ ಪ್ರಮಾಣಕ್ಕೆ ಯಾವುದೇ ಮಿತಿ ಇರುವುದಿಲ್ಲ ಮತ್ತು ಇದಕ್ಕಾಗಿ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಾಗುವುದು" ಎಂದು ಅವರು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com