ಚಂಡೀಗಢ ಮೇಯರ್ ಚುನಾವಣೆ: ಎಂಟು 'ಅಸಿಂಧು' ಮತಗಳನ್ನೂ ಸೇರಿಸಿ ಮರು ಎಣಿಕೆಗೆ ಸುಪ್ರೀಂ ಕೋರ್ಟ್ ಆದೇಶ

ಚಂಡೀಗಢ ಮೇಯರ್ ಚುನಾವಣೆಯಲ್ಲಿ ಚಲಾವಣೆಯಲ್ಲಿ 'ಅಸಿಂಧು'ಗೊಳಿಸಲಾದ ಎಂಟು ಮತಗಳನ್ನೂ ಸೇರಿಸಿ ಮತಗಳ ಮರುಎಣಿಕೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.
ಅನಿಲ್ ಮಸಿಹ್
ಅನಿಲ್ ಮಸಿಹ್
Updated on

ನವದೆಹಲಿ: ವಿವಾದಾತ್ಮಕ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಚಲಾವಣೆಯಲ್ಲಿ 'ಅಸಿಂಧು'ಗೊಳಿಸಲಾದ ಎಂಟು ಮತಗಳನ್ನೂ ಸೇರಿಸಿ ಮತಗಳ ಮರುಎಣಿಕೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

ಚುನಾವಣಾ ಅಧಿಕಾರಿ ಅನಿಲ್ ಮಸಿಹ್ ಅವರು ಚುನಾವಣೆಯಲ್ಲಿ ಅವ್ಯವಹಾರ ಎಸಗಿದ್ದಾರೆ ಎಂದು ಆರೋಪಿಸಿ ಪರಾಜಿತ ಎಎಪಿ ಅಭ್ಯರ್ಥಿ ಕುಲದೀಪ್ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನ ರಿಜಿಸ್ಟ್ರಾರ್ ಜನರಲ್ ನೇಮಿಸಿದ ನ್ಯಾಯಾಂಗ ಅಧಿಕಾರಿಯೊಬ್ಬರು ತನ್ನ ಮುಂದೆ ಹಾಜರುಪಡಿಸಿದ ಮತಪತ್ರಗಳನ್ನು ಮತ್ತು ಇಡೀ ಚುನಾವಣಾ ಪ್ರಕ್ರಿಯೆಯ ವಿಡಿಯೋವನ್ನು ಸರ್ವೋಚ್ಚ ನ್ಯಾಯಾಲಯವು ಪರಿಶೀಲಿಸುತ್ತಿದೆ.

ಅನಿಲ್ ಮಸಿಹ್
ಚಂಡೀಗಢ ಮೇಯರ್ ಚುನಾವಣಾಧಿಕಾರಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಸುಪ್ರೀಂ ಕೋರ್ಟ್

"ಅಸಿಂಧುಗೊಂಡ ಮತಪತ್ರಗಳನ್ನು ನೋಡಲು ನಾವು ಬಯಸುತ್ತೇವೆ" ಎಂದು ಸಿಜೆಐ ಆರಂಭದಲ್ಲಿ ಹೇಳಿದರು. ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿದೆ.

ಸೋಮವಾರ ಸುಪ್ರೀಂ ಕೋರ್ಟ್‌ ನಲ್ಲಿ ವಿಚಾರಣೆಗೆ ಹಾಜರಾದ ಚುನಾವಣಾ ಅಧಿಕಾರಿ ಅನಿಲ್‌ ಮೆಸಿಹ್‌ ಅವರು ಮತಪತ್ರಗಳನ್ನು ತಿರುಚಿದ್ದನ್ನು ಒಪ್ಪಿಕೊಂಡಿದ್ದರು. ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರ ನೇತೃತ್ಬದ ಪೀಠ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿತ್ತಲ್ಲದೆ ಕುದುರೆ ವ್ಯಾಪಾರದ ವಿರುದ್ಧ ಕಳವಳ ವ್ಯಕ್ತಪಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com