ರೈತ ಮುಖಂಡರೊಂದಿಗೆ ಮತ್ತೊಮ್ಮೆ ಮಾತುಕತೆಗೆ ಸರ್ಕಾರ ಸಿದ್ಧವಿದೆ: ಕೃಷಿ ಸಚಿವ ಅರ್ಜುನ್ ಮುಂಡಾ

ಎಂಎಸ್‌ಪಿ ಬೇಡಿಕೆ, ಬೆಳೆ ವೈವಿಧ್ಯೀಕರಣ, ಕೃಷಿ ತ್ಯಾಜ್ಯದ ಸಮಸ್ಯೆ ಸೇರಿದಂತೆ ಮತ್ತಿತರ ಎಲ್ಲ ವಿಷಯಗಳ ಕುರಿತು ಚರ್ಚಿಸಲು ರೈತ ಮುಖಂಡರೊಂದಿಗೆ ಹೊಸ ಸುತ್ತಿನ ಮಾತುಕತೆಗೆ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಬುಧವಾರ ಹೇಳಿದ್ದಾರೆ.
ಪಟಿಯಾಲ ಜಿಲ್ಲೆಯ ಪಂಜಾಬ್-ಹರಿಯಾಣ ಶಂಭು ಗಡಿಯ ಬಳಿ ಮಂಜಿನ ನಡುವೆ ತಮ್ಮ 'ದೆಹಲಿ ಚಲೋ' ಮೆರವಣಿಗೆಯಲ್ಲಿ ರೈತರು ಪ್ರತಿಭಟಿಸಿದರು.
ಪಟಿಯಾಲ ಜಿಲ್ಲೆಯ ಪಂಜಾಬ್-ಹರಿಯಾಣ ಶಂಭು ಗಡಿಯ ಬಳಿ ಮಂಜಿನ ನಡುವೆ ತಮ್ಮ 'ದೆಹಲಿ ಚಲೋ' ಮೆರವಣಿಗೆಯಲ್ಲಿ ರೈತರು ಪ್ರತಿಭಟಿಸಿದರು.
Updated on

ನವದೆಹಲಿ: ಎಂಎಸ್‌ಪಿ ಬೇಡಿಕೆ, ಬೆಳೆ ವೈವಿಧ್ಯೀಕರಣ, ಕೃಷಿ ತ್ಯಾಜ್ಯದ ಸಮಸ್ಯೆ ಸೇರಿದಂತೆ ಮತ್ತಿತರ ಎಲ್ಲ ವಿಷಯಗಳ ಕುರಿತು ಚರ್ಚಿಸಲು ರೈತ ಮುಖಂಡರೊಂದಿಗೆ ಹೊಸ ಸುತ್ತಿನ ಮಾತುಕತೆಗೆ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಬುಧವಾರ ಹೇಳಿದ್ದಾರೆ.

ದೆಹಲಿ ಚಲೋ ಪ್ರತಿಭಟನೆಯನ್ನು ಪುನರಾರಂಭಿಸಿರುವ ರೈತರು ರಾಷ್ಟ್ರ ರಾಜಧಾನಿ ದೆಹಲಿಯತ್ತ ಮುಖ ಮಾಡಿದ್ದು, ಕೇಂದ್ರ ಕೃಷಿ ಸಚಿವರು ಮಾತುಕತೆಗೆ ಸಿದ್ಧ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ನಾನು ಮತ್ತೊಮ್ಮೆ ರೈತ ಮುಖಂಡರನ್ನು ಮಾತುಕತೆಗೆ ಆಹ್ವಾನಿಸುತ್ತಿದ್ದೇನೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)' ಕೃಷಿ ತ್ಯಾಜ್ಯ ಮತ್ತು ಬೆಲೆ ವೈವಿಧ್ಯೀಕರಣ ಸೇರಿದಂತೆ ರೈತರ ಎಲ್ಲ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಿದ್ಧರಿದ್ದೇವೆ. ಶಾಂತಿ ಕಾಪಾಡುವಂತೆ ನಾನು ಅವರಿಗೆ ಮನವಿ ಮಾಡುತ್ತೇನೆ. ಮಾತುಕತೆಯ ಮೂಲಕವೇ ನಾವು ಪರಿಹಾರ ಕಂಡುಕೊಳ್ಳಬೇಕು' ಎಂದರು.

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತ ಸರ್ಕಾರದ ಪ್ರಸ್ತಾವನೆಯನ್ನು ರೈತ ಮುಖಂಡರು ತಿರಸ್ಕರಿಸಿದ ನಂತರ, ಕೇಂದ್ರ ಸಚಿವ ಅರ್ಜುನ್ ಮುಂಡಾ ಮಂಗಳವಾರ ಪ್ರತಿಭಟನಾಕಾರರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದರು. 'ನಾವು ಚರ್ಚೆಯ ಮೂಲಕವೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು... ನಾವೆಲ್ಲರೂ ಒಟ್ಟಾಗಿ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು' ಎಂದು ಸಚಿವರು ಹೇಳಿದರು.

ಪಟಿಯಾಲ ಜಿಲ್ಲೆಯ ಪಂಜಾಬ್-ಹರಿಯಾಣ ಶಂಭು ಗಡಿಯ ಬಳಿ ಮಂಜಿನ ನಡುವೆ ತಮ್ಮ 'ದೆಹಲಿ ಚಲೋ' ಮೆರವಣಿಗೆಯಲ್ಲಿ ರೈತರು ಪ್ರತಿಭಟಿಸಿದರು.
ದೆಹಲಿ ಚಲೋ: ರೈತರ ಬಳಿ ಇರುವ ಜೆಸಿಬಿ, ಬೃಹತ್ ಯಂತ್ರೋಪಕರಣ ವಶಕ್ಕೆ ಪಡೆಯಲು ಹರ್ಯಾಣ ಡಿಜಿಪಿ ಸೂಚನೆ

ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಗಡಿಯಲ್ಲಿನ ಬ್ಯಾರಿಕೇಡ್‌ಗಳು ಮತ್ತು ದಿಗ್ಬಂಧನಗಳನ್ನು ತೆಗೆದುಹಾಕಬೇಕು ಮತ್ತು ರೈತರು ದೆಹಲಿಗೆ ಶಾಂತಿಯುತವಾಗಿ ಮೆರವಣಿಗೆ ಮಾಡಲು ಅನುವು ಮಾಡಿಕೊಡಬೇಕೆಂದು ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಾನ್ ಸಿಂಗ್ ಪಂಧೇರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ರೈತರನ್ನು ತಡೆಯಲು ಅಶ್ರುವಾಯು ಸಿಡಿಸಿದ ಪೊಲೀಸರು

ಈಮಧ್ಯೆ, ಕೆಲವು ರೈತರು ಬುಧವಾರ ಪಂಜಾಬ್ ಮತ್ತು ಹರಿಯಾಣದ ಶಂಭು ಗಡಿಯಲ್ಲಿ ಬ್ಯಾರಿಕೇಡ್‌ಗಳತ್ತ ನುಗ್ಗುತ್ತಿರುವುದನ್ನು ತಡೆಯಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಹರಿಯಾಣದ ಪೊಲೀಸರು ಬೆಳಗ್ಗೆ 11 ಗಂಟೆ ಸುಮಾರಿಗೆ ಅಶ್ರುವಾಯು ಪ್ರಯೋಗಿಸಿದ ನಂತರ, ಕೆಲವು ರೈತರು ರಕ್ಷಣೆಗಾಗಿ ಓಡಿಹೋದರು.

ಪಟಿಯಾಲ ಜಿಲ್ಲೆಯ ಪಂಜಾಬ್-ಹರಿಯಾಣ ಶಂಭು ಗಡಿಯ ಬಳಿ ಮಂಜಿನ ನಡುವೆ ತಮ್ಮ 'ದೆಹಲಿ ಚಲೋ' ಮೆರವಣಿಗೆಯಲ್ಲಿ ರೈತರು ಪ್ರತಿಭಟಿಸಿದರು.
ಬೇಡಿಕೆಗಳನ್ನು ಈಡೇರಿಸಿ: ಸರ್ಕಾರದ ಪ್ರಸ್ತಾವನೆ ತಿರಸ್ಕರಿಸಿದ ಬೆನ್ನಲ್ಲೇ ರೈತರ ಆಗ್ರಹ

ಈಮಧ್ಯೆ, ಪಂಜಾಬ್ ಪೊಲೀಸರು ಈಗ ಶಂಭು ಗಡಿ ಕಡೆಗಿನ ಸಂಚಾರವನ್ನು ನಿರ್ಬಂಧಿಸಿದ್ದಾರೆ. ರೈತರ ವಾಹನಗಳನ್ನು ಹೊರತುಪಡಿಸಿ ಉಳಿದೆಲ್ಲ ವಾಹನಗಳನ್ನು ರಾಜಪುರದ ಬಳಿಯಿಂದ ತಿರುಗಿಸಲಾಗುತ್ತಿದೆ.

ಹರಿಯಾಣ ಪೊಲೀಸರ ನಿಯೋಜನೆ ಜೊತೆಗೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಪಂಜಾಬ್ ಕೂಡ ಶಂಭು ಗಡಿಯಲ್ಲಿ ತನ್ನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದೆ.

ಪಟಿಯಾಲ, ಮೊಹಾಲಿ ಮತ್ತು ಫತೇಘರ್ ಸಾಹಿಬ್‌ನಲ್ಲಿ ರೈತ ಸಂಘಗಳು ಮತ್ತು ಹರಿಯಾಣ ಪೊಲೀಸ್ ಸಿಬ್ಬಂದಿ ನಡುವೆ ಘರ್ಷಣೆ ಸಂಭವಿಸುವ ಸಾಧ್ಯತೆಯಿರುವುದರಿಂದ ಆಸ್ಪತ್ರೆಗಳು ಸಿದ್ಧತೆಯಿಂದಿರಲು ತಿಳಿಸಲಾಗಿದೆ.

ಪಟಿಯಾಲ ಜಿಲ್ಲೆಯ ಪಂಜಾಬ್-ಹರಿಯಾಣ ಶಂಭು ಗಡಿಯ ಬಳಿ ಮಂಜಿನ ನಡುವೆ ತಮ್ಮ 'ದೆಹಲಿ ಚಲೋ' ಮೆರವಣಿಗೆಯಲ್ಲಿ ರೈತರು ಪ್ರತಿಭಟಿಸಿದರು.
ರೈತರ ಪ್ರತಿಭಟನೆ: 177 ಸಾಮಾಜಿಕ ಜಾಲತಾಣ ಖಾತೆ, ವೆಬ್ ಲಿಂಕ್ ಗಳಿಗೆ ಕೇಂದ್ರ ಸರ್ಕಾರ ತಾತ್ಕಾಲಿಕ ನಿರ್ಬಂಧ

ಬಿಜೆಪಿ ನೇತೃತ್ವದ ಕೇಂದ್ರದ ಪ್ರಸ್ತಾವನೆಯನ್ನು ತಿರಸ್ಕರಿಸಿದ ನಂತರ ರೈತರು ಇಂದು ಪಂಜಾಬ್ ಮತ್ತು ಹರಿಯಾಣ ಗಡಿಗಳಲ್ಲಿ ಸಾವಿರಾರು ರೈತರು 'ದೆಹಲಿ ಚಲೋ' ಮೆರವಣಿಗೆಯನ್ನು ಪುನರಾರಂಭಿಸಿದ್ದಾರೆ.

ಫೆಬ್ರುವರಿ 13 ರಂದು ದೆಹಲಿಗೆ ತಮ್ಮ ಮೆರವಣಿಗೆಯನ್ನು ಪ್ರಾರಂಭಿಸಿದ ಸಾವಿರಾರು ರೈತರನ್ನು ಹರಿಯಾಣ ಗಡಿಯಲ್ಲಿಯೇ ತಡೆಹಿಡಿಯಲಾಯಿತು. ಅಂದಿನಿಂದ ಹರಿಯಾಣ ಮತ್ತು ಪಂಜಾಬ್‌‌ನ ಶಂಭು ಮತ್ತು ಖಾನೌರಿ ಪಾಯಿಂಟ್‌ಗಳಲ್ಲಿ ರೈತರು ಬಿಡಾರ ಹೂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com