ಪ್ರತಿಭಟನಾ ನಿರತ ರೈತ ಸಾವು: ಸಂತ್ರಸ್ತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ, ಸಹೋದರಿಗೆ ಸರ್ಕಾರಿ ಉದ್ಯೋಗ

ರೈತರು ನಡೆಸುತ್ತಿರುವ ಪ್ರತಿಭಟನೆ ವೇಳೆ ಖಾನೌರಿ ಗಡಿಯಲ್ಲಿ ಸಾವಿಗೀಡಾದ ರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಮತ್ತು ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ಘೋಷಿಸಿದ್ದಾರೆ.
ಪಂಜಾಬ್ ಸಿಎಂ ಭಗವಂತ್ ಮಾನ್
ಪಂಜಾಬ್ ಸಿಎಂ ಭಗವಂತ್ ಮಾನ್
Updated on

ಚಂಡೀಗಢ: ವಿವಿಧ ಭೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವೇಳೆ ಖಾನೌರಿ ಗಡಿಯಲ್ಲಿ ಸಾವಿಗೀಡಾದ ರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಮತ್ತು ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ಘೋಷಿಸಿದ್ದಾರೆ.

ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖಾನೌರಿ ಗಡಿಯಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ಬಟಿಂಡಾ ಮೂಲದ ಸಿಂಗ್ (21) ಸಾವಿಗೀಡಾಗಿದ್ದು, 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಪ್ರತಿಭಟನಾ ನಿರತ ರೈತರು ಬ್ಯಾರಿಕೇಡ್‌ಗಳತ್ತ ಸಾಗಲು ಯತ್ನಿಸಿದಾಗ ಈ ಘಟನೆ ನಡೆದಿದೆ.

ಪಂಜಾಬ್ ಸಿಎಂ ಭಗವಂತ್ ಮಾನ್
ಪ್ರತಿಭಟನಾ ನಿರತ ರೈತ ಸಾವು: ದೆಹಲಿ ಚಲೋ ಮೆರವಣಿಗೆ 2 ದಿನ ಮುಂದೂಡಿಕೆ

'ಖಾನೌರಿ ಗಡಿಯಲ್ಲಿ ನಡೆದ ರೈತರ ಪ್ರತಿಭಟನೆ ವೇಳೆ ಹುತಾತ್ಮರಾದ ಶುಭಕರನ್ ಸಿಂಗ್ ಕುಟುಂಬಕ್ಕೆ ಪಂಜಾಬ್ ಸರ್ಕಾರದಿಂದ 1 ಕೋಟಿ ರೂ. ಆರ್ಥಿಕ ನೆರವು ಹಾಗೂ ಅವರ ತಂಗಿಗೆ ಸರ್ಕಾರಿ ನೌಕರಿ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಮಾನ್ ಪಂಜಾಬಿಯಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com