ಜುಲೈ 1 ರಿಂದ ಮೂರು ಹೊಸ ಅಪರಾಧ ಕಾನೂನುಗಳು ಜಾರಿಗೆ!

ದೇಶದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮರುಪರಿಶೀಲಿಸಲು ಹೊಸದಾಗಿ ಜಾರಿಗೆ ತರಲಾದ ಮೂರು ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ

ನವದೆಹಲಿ: ದೇಶದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮರುಪರಿಶೀಲಿಸಲು ಹೊಸದಾಗಿ ಜಾರಿಗೆ ತರಲಾದ ಮೂರು ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ.

ಭಾರತೀಯ ನ್ಯಾಯ ( ದ್ವಿತೀಯ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ದ್ವಿತೀಯ) ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ (ದ್ವಿತೀಯ) ಕಾಯ್ದೆಗಳು ಜುಲೈನಿಂದ ಅನುಷ್ಟಾನಕ್ಕೆ ಬರಲಿವೆ.

ಈ ಮೂರು ಕಾನೂನುಗಳಿಗೆ ಕಳೆದ ವರ್ಷ ಡಿಸೆಂಬರ್ 21 ರಂದು ಸಂಸತ್ತಿನಲ್ಲಿ ಅನುಮೋದನೆ ನೀಡಲಾಗಿತ್ತು. ಡಿಸೆಂಬರ್ 25 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದರು.

ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆ ಪ್ರಕಾರ ಮೂರು ಹೊಸ ಕಾನೂನುಗಳ ನಿಬಂಧನೆಗಳು ಜುಲೈ 1 ರಿಂದ ಜಾರಿಗೆ ಬರಲಿವೆ. ಈ ಕಾನೂನುಗಳು ವಸಾಹತುಶಾಹಿ-ಯುಗದ ಕ್ರಮವಾಗಿ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು 1872 ರ ಭಾರತೀಯ ಸಾಕ್ಷಿ ಕಾಯ್ದೆಯನ್ನು ಬದಲಾಯಿಸಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ
ಐಪಿಸಿ, ಸಿಆರ್ ಪಿಸಿಗೆ ಪರ್ಯಾಯ: 3 ಕ್ರಿಮಿನಲ್ ಕಾನೂನು ತಿದ್ದುಪಡಿ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ಮೂರು ಕಾನೂನುಗಳು ವಿವಿಧ ಅಪರಾಧಗಳು ಮತ್ತು ಅವುಗಳ ಶಿಕ್ಷೆಗಳ ವ್ಯಾಖ್ಯಾನಗಳನ್ನು ನೀಡುವ ಮೂಲಕ ದೇಶದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಕೂಲಂಕಷವಾಗಿ ಪರಿಶೀಲಿಸುವ ಗುರಿಯನ್ನು ಹೊಂದಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com