ನಾಗ್ಪುರ: ಕೆಲಸದ ಬಗ್ಗೆ ಟೀಕೆ ಮಾಡಿದ ಸೀನಿಯರ್ ಐಟಿ ಉದ್ಯೋಗಿಯನ್ನೇ ಕೊಂದ ಜೂನಿಯರ್

ನಾಗ್ಪುರದಲ್ಲಿ ಐಟಿ ಕಂಪನಿಯೊಂದರ ಸೀನಿಯರ್ ಉದ್ಯೋಗಿಯನ್ನು ಕೊಂದ ಆರೋಪದ ಮೇಲೆ ಕಿರಿಯ ಸಹೋದ್ಯೋಗಿಯೊಬ್ಬರನ್ನು ಬಂಧಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನಾಗ್ಪುರ: ನಾಗ್ಪುರದಲ್ಲಿ ಐಟಿ ಕಂಪನಿಯೊಂದರ ಸೀನಿಯರ್ ಉದ್ಯೋಗಿಯನ್ನು ಕೊಂದ ಆರೋಪದ ಮೇಲೆ ಕಿರಿಯ ಸಹೋದ್ಯೋಗಿಯೊಬ್ಬರನ್ನು ಬಂಧಿಸಲಾಗಿದೆ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಹತ್ಯೆಯಾದ ವ್ಯಕ್ತಿಯನ್ನು ಎಲ್ ದೇವನಾಥನ್ ಲಕ್ಷ್ಮೀನರಸಿಂಹನ್(21) ಎಂದು ಗುರುತಿಸಲಾಗಿದೆ. ಅವರು ಕಳೆದ ಹತ್ತು ತಿಂಗಳಿನಿಂದ ಹೆಕ್ಸಾವೇರ್ ಟೆಕ್ನಾಲಜೀಸ್‌ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು ಎಂದು ನಾಗ್ಪುರ ಪೊಲೀಸರು ತಿಳಿಸಿದ್ದಾರೆ.

ಶ್ಯಾಮ್ ನಗರ ಪ್ರದೇಶದ ಫ್ಲಾಟ್‌ನಲ್ಲಿ ಈ ಘಟನೆ ನಡೆದಿದ್ದು, ಮೃತನ ಸಹೋದ್ಯೋಗಿಗಳಾದ ಚಾಂಡೆಲ್ ಮತ್ತು ಪವನ್ ಅನಿಲ್ ಗುಪ್ತಾ ಅಲಿಯಾಸ್ ಹಲ್ವಾಯಿ ಎಲ್ಲರೂ ಒಟ್ಟಿಗೆ ಮದ್ಯ ಸೇವಿಸುತ್ತಿದ್ದರು. ಈ ವೇಳೆ ದೇವನಾಥನ್ ಅವರು ಚಾಂಡೆಲ್ ಅವರ ಕೆಲಸದಲ್ಲಿನ ಕಾರ್ಯಕ್ಷಮತೆಯ ಬಗ್ಗೆ ಪ್ರಶ್ನಿಸಿದ್ದಾರೆ. ಇದರಿಂದ ಕೋಪಗೊಂಡ ಚಾಂಡೆಲ್ ಚಾಕುವಿಂದ ದೇವನಾಥನ ಅವರ ಎದೆಗೆ ಇರಿದಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ
ಹರಿಯಾಣ: ಅಪರಿಚಿತ ದುಷ್ಕರ್ಮಿಗಳಿಂದ ಐಎನ್‌ಎಲ್‌ಡಿ ಅಧ್ಯಕ್ಷನ ಗುಂಡಿಕ್ಕಿ ಹತ್ಯೆ

ಚಂಡೇಲ್ ಮತ್ತು ಹಲ್ವಾಯಿ, ಗಂಭೀರವಾಗಿ ಗಾಯಗೊಂಡಿದ್ದ ದೇವನಾಥನ್ ಅವರನ್ನು ಬುಧವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ಕರೆದೊಯ್ದ ಬಳಿಕ ಈ ಕೃತ್ಯ ಬೆಳಕಿಗೆ ಬಂದಿದೆ.

ದೇವನಾಥನ್ ಬಿದ್ದು ಗಾಯಗೊಂಡಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿಗೆ ತಿಳಿಸಿದ್ದಾರೆ. ಆದರೆ ಅವರ ದೇಹದ ಮೇಲೆ ಚಾಕು ಇರಿತದ ಗಾಯಗಳು ಇದ್ದಿದ್ದರಿಂದ ಅನುಮಾನಗೊಂಡ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ವಿಚಾರಣೆಗೊಳಪಡಿಸಿದ ಬಳಿಕ ಚಾಂಡೆಲ್ ತಪ್ಪೊಪ್ಪಿಕೊಂಡಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com