ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಅಖಿಲೇಶ್ ಯಾದವ್ ಭಾಗಿ

ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭಾನುವಾರ ಆಗ್ರಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯಲ್ಲಿ ಭಾಗವಹಿಸಿದರು.
ರಾಹುಲ್ ಗಾಂಧಿ - ಅಖಿಲೇಶ್ ಯಾದವ್
ರಾಹುಲ್ ಗಾಂಧಿ - ಅಖಿಲೇಶ್ ಯಾದವ್
Updated on

ಆಗ್ರಾ: ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಸೀಟು ಹಂಚಿಕೆ ಒಪ್ಪಂದ ಮಾಡಿಕೊಂಡ ಕೆಲವು ದಿನಗಳ ನಂತರ ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭಾನುವಾರ ಆಗ್ರಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯಲ್ಲಿ ಭಾಗವಹಿಸಿದರು.

ಉತ್ತರ ಪ್ರದೇಶದಲ್ಲಿ ಯಾತ್ರೆಯ ಕೊನೆಯ ಹಂತದಲ್ಲಿ ಅಖಿಲೇಶ್ ಯಾದವ್ ಅವರು ರಾಹುಲ್ ಗಾಂಧಿಗೆ ಸಾಥ್ ನೀಡಿದರು. ಯಾತ್ರೆ ಇಂದು ಆಗ್ರಾದಿಂದ ರಾಜಸ್ಥಾನ ಪ್ರವೇಶಿಸಿದೆ. ಏತನ್ಮಧ್ಯೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಮೊರಾದಾಬಾದ್‌ನಲ್ಲಿ ಶನಿವಾರ ಯಾತ್ರೆಯಲ್ಲಿ ಪಾಲ್ಗೊಂಡರು.

ಅಖಿಲೇಶ್ ಯಾದವ್ ಅವರು ಫೆಬ್ರವರಿ 21 ರಂದೇ ರಾಯ್ ಬರೇಲಿಯಲ್ಲಿ ಯಾತ್ರೆಯಲ್ಲಿ ಭಾಗವಹಿಸಬೇಕಿತ್ತು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆ ಅಂತಿಮಗೊಂಡ ನಂತರವೇ ನಾನು ಯಾತ್ರೆಯಲ್ಲಿ ಭಾಗವಹಿಸುತ್ತೇನೆ ಎಂದು ಎಸ್‌ಪಿ ಮುಖ್ಯಸ್ಥ ಹೇಳಿದ್ದರು.

ರಾಹುಲ್ ಗಾಂಧಿ - ಅಖಿಲೇಶ್ ಯಾದವ್
ಅಖಿಲೇಶ್ ಗೆ ಶಾಕ್: ಸಮಾಜವಾದಿ ಪಕ್ಷ ತೊರೆದ MLC ಸ್ವಾಮಿ ಪ್ರಸಾದ್ ಮೌರ್ಯ; ಹೊಸ ಪಕ್ಷ ಕಟ್ಟುತ್ತಾರಾ?

‘ಬಿಜೆಪಿ ಹಠಾವೋ, ದೇಶ್ ಬಚಾವೋ’ ಘೋಷಣೆಯನ್ನು ಎತ್ತಿದ ಎಸ್‌ಪಿ ಮುಖ್ಯಸ್ಥ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಜಾಪ್ರಭುತ್ವ ಮತ್ತು ಭಾರತೀಯ ಸಂವಿಧಾನವನ್ನು ಉಳಿಸುವುದು ಎಲ್ಲಾ ಪಕ್ಷಗಳಿಗೆ ದೊಡ್ಡ ಸವಾಲಾಗಿದೆ ಎಂದು ಹೇಳಿದರು.

ಬಿಜೆಪಿಯನ್ನು ಸೋಲಿಸುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಕನಸನ್ನು ನನಸಾಗಿಸುವುದು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಮುಖ ಕಾರ್ಯವಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com