ತೆಲಂಗಾಣ ಸರ್ಕಾರ
ತೆಲಂಗಾಣ ಸರ್ಕಾರ

ಅಪಘಾತದಲ್ಲಿ ಶಾಸಕಿ ಲಾಸ್ಯ ನಂದಿತಾ ಸಾವು; ಸಚಿವರು, ಶಾಸಕರ ಚಾಲಕರಿಗೆ ಡ್ರೈವಿಂಗ್ ಟೆಸ್ಟ್ ನಡೆಸಲಿದೆ ತೆಲಂಗಾಣ ಸರ್ಕಾರ

ಸಚಿವರು, ಶಾಸಕರು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಚಾಲಕರಿಗೆ ಡ್ರೈವಿಂಗ್ ಟೆಸ್ಟ್ ನಡೆಸಲಾಗುವುದು ಎಂದು ತೆಲಂಗಾಣ ಸರ್ಕಾರ ಹೇಳಿದೆ. ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಅವರು ರಸ್ತೆ ಅಪಘಾತದಲ್ಲಿ ಸಾವಿಗೀಡಾದ ಎರಡು ದಿನಗಳ ನಂತರ ಈ ಘೋಷಣೆ ಬಂದಿದೆ.
Published on

ಹೈದರಾಬಾದ್: ಸಚಿವರು, ಶಾಸಕರು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಚಾಲಕರಿಗೆ ಡ್ರೈವಿಂಗ್ ಟೆಸ್ಟ್ ನಡೆಸಲಾಗುವುದು ಎಂದು ತೆಲಂಗಾಣ ಸರ್ಕಾರ ಹೇಳಿದೆ.

ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಅವರು ರಸ್ತೆ ಅಪಘಾತದಲ್ಲಿ ಸಾವಿಗೀಡಾದ ಎರಡು ದಿನಗಳ ನಂತರ ಈ ಘೋಷಣೆ ಬಂದಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಪೊನ್ನಂ ಪ್ರಭಾಕರ್, ರಸ್ತೆ ಅಪಘಾತಗಳಲ್ಲಿ ವಿಐಪಿಗಳ ಮರಣವನ್ನು ಉಲ್ಲೇಖಿಸಿ, ಅನನುಭವಿ ಚಾಲಕರು ಇದಕ್ಕೆ ಕಾರಣ. ದೂರದ ಪ್ರಯಾಣಕ್ಕೆ ಸಮರ್ಥ ಚಾಲಕರನ್ನು ನೇಮಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಈಮಧ್ಯೆ, ಪ್ರಕರಣದ ತನಿಖೆಯ ಭಾಗವಾಗಿ ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಅವರ ಕಾರನ್ನು ಚಲಾಯಿಸಿದ ಆಪ್ತ ಸಹಾಯಕನ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತೆಲಂಗಾಣ ಸರ್ಕಾರ
ತೆಲಂಗಾಣದಲ್ಲಿ ಭೀಕರ ಅಪಘಾತ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಬಿಆರ್ ಎಸ್ ಶಾಸಕಿ ಲಾಸ್ಯ ನಂದಿತಾ ಸಾವು

ಸಿಕಂದರಾಬಾದ್ ಕಂಟೋನ್ಮೆಂಟ್‌ನ ಶಾಸಕಿ ಲಾಸ್ಯ ನಂದಿತಾ ಅವರು ಶುಕ್ರವಾರ ನೆರೆಯ ಸಂಗಾರೆಡ್ಡಿ ಜಿಲ್ಲೆಯ ಪಟಂಚೇರು ಎಂಬಲ್ಲಿ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com